ಪ್ರಸ್ತುತ ಪ್ರಾಣೇಶ್ ಯಡಿಯಾಳ ಹಾಗೂ ರಾಜೇಶ್ ಭಟ್’ನನ್ನು ಹಾಗು ಹೆಚ್ಚಿನ ತನಿಖೆಗೆ ಪೊಲೀಸ್ ವಶಕ್ಕೆ ಜೂ.18 ಸಂಜೆವರೆಗೆ ಕಸ್ಟಡಿಗೆ ನೀಡಲಾಗಿದೆ. ಕೊಲೆ ಪ್ರಕರಣದ ತನಿಖಾಧಿಕಾರಿಯವರು ಹೆಚ್ಚುವರಿ ತನಿಖೆ ಅಗತ್ಯವಿರುವ ಕಾರಣ ಪ್ರಕರಣದ ಆರೋಪಿ ಗಳಿಬ್ಬರನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಕೋರಿದ ಹಿನ್ನೆಲೆ ನ್ಯಾಯಾಲಯದಲ್ಲಿ ಕಾನೂನು ಅಧಿಕಾರಿ (ಕಿರಿಯ) ಮಮ್ತಾಜ್ ಅವರ ಮನವಿ ಆಲಿಸಿದ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ.
ಜೂ.5 ಶನಿವಾರ ರಾತ್ರಿ ವೇಳೆ ಯಡಮೊಗೆ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಹಾಗೂ ಆತನ ತಂಡ ಉದಯ್ ಗಾಣಿಗ ಅವರ ಮೈಮೇಲೆ ಕಾರು ಹತ್ತಿಸಿ ಆ ಬಳಿಕ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಬಗ್ಗೆ ಉದಯ್ ಗಾಣಿಗಪತ್ನಿ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಕೊಲೆ ಪ್ರಕರಣದ ಪ್ರಮುಖ ಆರೋಪಿ ಯಡಮೊಗೆ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ನನ್ನು ಭಾನುವಾರ ನಸುಕಿನ ಜಾವ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.