ಪೌರ ಕಾರ್ಮಿಕರಿಗೆ ಹಲ್ಲೆ ಪ್ರಕರಣ ಹಿನ್ನೆಲೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್ ಕ್ಷಮೆ ಯಾಚನೆ

ಉಡುಪಿ: ಎಲೆಕ್ಟ್ರಾನಿಕ್ಸ್ ಅಂಗಡಿಯ ಉದ್ಯೋಗಿಯೊಬ್ಬರು ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರು ಹಾಗೂ ಅಂಗಡಿಯ ಮಾಲಿಕರೂ ಆಗಿರುವ ದಾವೂದ್ ಅಬೂಬಕರ್ ಕ್ಷಮೆ ಯಾಚಿಸಿದ್ದಾರೆ.

ಶುಕ್ರವಾರ ನನ್ನ ಅಸ್ಮಾ ಎಲೆಕ್ಟ್ರಾನಿಕ್ಸ್ ಅಂಗಡಿಯ ಉದ್ಯೋಗಿಯೊಬ್ಬರು ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿದ ಅಮಾನವೀಯ ಘಟನೆ ನನ್ನ ಗಮನಕ್ಕೆ ಬಂದಿದ್ದು ಅದಕ್ಕೆ  ನಾನು ಕ್ಷಮೆ ಯಾಚಿಸುತ್ತೇನೆ. ಇದು ಅಕ್ಷಮ್ಯ ಅಪರಾಧವಾಗಿದ್ದು ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ನಾನು ದೇಶದ ಕಾನೂನನ್ನು ಗೌರವಿಸುವವನಾಗಿದ್ದು, ಯಾವುದೇ ವ್ಯಕ್ತಿಯೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳುವುದು ಆರೋಗ್ಯಕರ ಸಮಾಜದ ಲಕ್ಷಣವಲ್ಲ. ಹಾಗಾಗಿ ಘಟನೆಯ ಬಗ್ಗೆ ಪೊಲೀಸ್ ಇಲಾಖೆ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ನಾನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply