ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳ ಸುತ್ತ ಮುತ್ತಲ 200ಮೀ ಪ್ರದೇಶ ನಿಷೇದಾಜ್ಞೆ~ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ.

ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಸಮವಸ್ತ್ರದ  ವಿವಾದದ ಹಿನ್ನಲೆಯಲ್ಲಿ ಹಾಗೂ ಜಿಲ್ಲೆಯಲ್ಲಿನ  ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿರುವ ಹಿನ್ನಲೆಯಲ್ಲಿ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳ ಸುತ್ತ ಮುತ್ತಲು 200ಮೀ ಪ್ರದೇಶವನ್ನು ದಿನಾಂಕ: 14-02-2022  ರ ಬೆಳಿಗ್ಗೆ 6.00 ರಿಂದ ದಿನಾಂಕ 19-02-2022ರ  ಸಂಜೆ  6.00ಗಂಟೆಯವರೆಗೆ ನಿಷೇದಾಜ್ಞೆಯನ್ನು ವಿಧಿಸಿ ಆದೇಶಿಸಲಾಗಿರುತ್ತದೆ.
 ಆದ್ದರಿಂದ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಲು ಕೋರಲಾಗಿದೆ. ಸಮವಸ್ತ್ರದ  ವಿವಾದದ ಹಿನ್ನಲೆಯಲ್ಲಿ ಮಾನ್ಯ ಉಚ್ಚ ನ್ಯಾಯಾಲಯದ ವಿಸ್ತೃತ ಪೀಠದಲ್ಲಿ ಮಧ್ಯಂತರ ಆದೇಶವಾಗಿದ್ದು  ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ  ಕಾಲೇಜು ಅಭಿವೃದ್ಧಿ ಮಂಡಳಿ/ ಕಾಲೇಜು ಆಡಳಿತ ಮಂಡಳಿ/ ಕಾಲೇಜು ಶಿಸ್ತು ಸಮಿತಿ ಮತ್ತು ಶಿಕ್ಷಕರ/ ಪಾಲಕರ ಸಭೆಗಳನ್ನು ಕೂಡಲೇ ಕರೆದು ಮಾನ್ಯ ಉಚ್ಚ ನ್ಯಾಯಾಲಯದ ವಿಸ್ತೃತ ಪೀಠದಲ್ಲಿ ಮಧ್ಯಂತರ ಆದೇಶ ದಾದುದನ್ನು ಮನವರಿಕೆ ಮಾಡುವಂತೆ ಹಾಗೂ ಮುಂದಿನ ದಿನಗಳಲ್ಲಿ ಯಾವುದೇ ತರಹದ ಗೊಂದಲಗಳಾಗದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಕ್ಕಳ ಶಿಕ್ಷಣಕ್ಕೆ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮ ವಹಿಸಲು ಎಲ್ಲಾ ಪದವಿಪೂರ್ವ/ ಪದವಿ ಕಾಲೇಜುಗಳ  ಪ್ರಾಂಶುಪಾಲರಿಗೆ ಅಗತ್ಯ  ನಿರ್ದೇಶನವನ್ನು ನೀಡಲಾಗಿದೆ.

ಸದ್ರಿ ವಿಚಾರವಾಗಿ ಸಮಾಜದ ಸಂಬಂಧಪಟ್ಟ ಸಂಘಟನೆಯ/ ಮುಖಂಡರುಗಳ ಸಭೆಯನ್ನು ಕರೆದು ಮಾನ್ಯ ಉಚ್ಚ ನ್ಯಾಯಾಲಯದ ವಿಸ್ತೃತ ಪೀಠದಲ್ಲಿ ನೀಡಿರುವ ಮಧ್ಯಂತರ ಆದೇಶವನ್ನು ಪಾಲಿಸುವ ನಿಟ್ಟಿನಲ್ಲಿ ಯಾವುದೇ ಗೊಂದಲ ಆಗದಂತೆ ಶಾಂತಿ ಸುವ್ಯವಸ್ಥೆಗೆ ಭಂಗವಾಗದಂತೆ ಹಾಗೂ ಮಕ್ಕಳ ಶೈಕ್ಷಣಿಕ ಹಿತದೃಷ್ಠಿಯಿಂದ ಯಾವುದೇ ತೊಂದರೆ  ಉಂಟಾಗದಂತೆ ಸಂಬಂಧ ಪಟ್ಟವರೊಂದಿಗೆ ಚರ್ಚಿಸಲು ಹಾಗೂ ಜಿಲ್ಲೆಯಲ್ಲಿ ಕಾನೂನು ಸುವ್ಯವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲು ಜಿಲ್ಲೆಯ ಎಲ್ಲಾ ತಹಶೀಲ್ದಾರರಿಗೆ ಈಗಾಗಲೇ ನಿರ್ದೇಶನವನ್ನು ನೀಡಲಾಗಿರುತ್ತದೆ.

 
ಆದ್ದರಿಂದ ಸಾರ್ವಜನಿಕರು  ಶಾಂತಿ  ಸುವ್ಯವಸ್ಥೆ  ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿ ಸಲು ವಿನಂತಿಸಲಾಗಿದೆ.  ಅದೇ ರೀತಿ ಸಾಮಾಜಿಕ ಜಾಲತಾಣದಲ್ಲಿ ಯಾವುದೇ ರೀತಿಯ ತಪ್ಪು ಸಂದೇಶ/ ಸುಳ್ಳು ವದಂತಿಗಳನ್ನು ಹರಡದೆ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.
           

          .

 
 
 
 
 
 
 
 
 
 
 

Leave a Reply