ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳ ಬಹಿರಂಗ ಹರಾಜು ಮಾಡಿದಲ್ಲಿ​ ಕ್ರಿಮಿನಲ್ ಪ್ರಕರಣ ದಾಖಲು- ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ 2020ಕ್ಕೆ​ ​ ​ಸಂಬಂಧಿಸಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತ್ ಸ್ಥಾನಗಳನ್ನು ಬಹಿರಂಗ ಹರಾಜಿನ ಮೂಲಕ​ ಮತದಾರರಿಗೆ ಹಣದ ಆಮಿಷವೊಡ್ಡಿ ಖರೀದಿಸುತ್ತಿರುವುದು ಕಂಡು​ಬಂದಿದ್ದು, ಈ ಬಗ್ಗೆ ರಾಜ್ಯ ಚುನಾವಣಾ​ ​ಆಯೋಗದ ಆಯುಕ್ತರು ಡಿಸೆಂಬರ್ 9 ರಂದು ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ, ಇಂತಹ ಪ್ರಕರಣಗಳು​ ಕಂಡು​ ಬಂದಲ್ಲಿ ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿರುತ್ತಾರೆ.
​​
ಈ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವತ್ರಿಕ ಚುನಾವಣೆಗೆ ​ಸಂಬಂಧಿಸಿದಂತೆ  ಬಹಿರಂಗ ಹರಾಜು ಹಾಗೂ​ ಹಣದ ಆಮೀಷಕ್ಕಾಗಿ ಸ್ಥಾನಗಳು ಖರೀದಿಸುವಂತಹ ಪ್ರಕರಣಗಳು ​ಕಂಡುಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್​ ಪ್ರಕರಣವನ್ನು ದಾಖಲಿಸಿ, ಅಂತಹ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಳಿಸುವಂತೆ ಚುನಾವಣಾ​ ಆಯೋಗಕ್ಕೆ ಮಾಹಿತಿಯನ್ನು ಸಲ್ಲಿಸಲಾಗುತ್ತದೆ.

ಇಂತಹ ಘಟನೆಗಳು ಸಾರ್ವಜನಿಕರಿಗೆ ​ಕಂಡುಬಂದಲ್ಲಿ ಸಂಬಂಧಪಟ್ಟ  ತಹಶೀಲ್ದಾರರಿಗೆ ಹಾಗೂ​ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply