ಈ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಬಹಿರಂಗ ಹರಾಜು ಹಾಗೂ ಹಣದ ಆಮೀಷಕ್ಕಾಗಿ ಸ್ಥಾನಗಳು ಖರೀದಿಸುವಂತಹ ಪ್ರಕರಣಗಳು ಕಂಡುಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿ, ಅಂತಹ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಮಾಹಿತಿಯನ್ನು ಸಲ್ಲಿಸಲಾಗುತ್ತದೆ.
ಇಂತಹ ಘಟನೆಗಳು ಸಾರ್ವಜನಿಕರಿಗೆ ಕಂಡುಬಂದಲ್ಲಿ ಸಂಬಂಧಪಟ್ಟ ತಹಶೀಲ್ದಾರರಿಗೆ ಹಾಗೂ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.