ಬ್ರಹ್ಮಾವರ ತಾಲೂಕಿನಲ್ಲಿ ಎದೆನೋವಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಬ್ರಹ್ಮಾವರದ ಚೇರ್ಕಾಡಿ ಗ್ರಾಮದ ರವಿರಾಜ್ ಟಿ. ಶೆಟ್ಟಿ (59 ವರ್ಷ) ಮೃತಪಟ್ಟವರು. ಇವರು ಅಕ್ಕನ ಮನೆಯ ಗೃಹ ಪ್ರವೇಶಕ್ಕೆ ಬಂದವರು ಮನೆಯಲ್ಲಿಯೇ ಇದ್ದಾಗ ನಿನ್ನೆ ಮಧ್ಯಾಹ್ನ 3:00 ಗಂಟೆಯ ಸುಮಾರಿಗೆ ಎದೆ ನೋವು ಕಾಣಿಸಿಕೊಂಡಿತ್ತು, ಈ ವೇಳೆ ಅವರನ್ನು ಬ್ರಹ್ಮಾವರದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿನ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದು ಕೊಂಡು ಹೋದಾಗ ಪರೀಕ್ಷಿಸಿದ ವೈಧ್ಯರು ರವಿರಾಜ್ಟಿ. ಶೆಟ್ಟಿರವರು ಈಗಾಗಲೇ ದಾರಿಮಧ್ಯೆ ಬರುವಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ರವಿರಾಜ್ ಟಿ. ಶೆಟ್ಟಿರವರು ಹೃದಯಾಘಾತದಿಂದ ಅಥವಾ ಇನ್ಯಾವುದೋ ದೈಹಿಕ ಖಾಯಿಲೆಯಿಂದ ಮೃತಪಟ್ಟಿದ್ದಾರೆ ಎಂಬುದಾಗಿ ಮೃತರ ಪತ್ನಿ ವನಿತಾ ಎಂಬವರು ನೀಡಿದ ಮಾಹಿತಿಯಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.