ಶಾರದಾ ಇಂಟರ್ನ್ಯಾಷನಲ್ ಹೊಟೇಲ್ ಮಾಲೀಕ ಬಿ. ಸುಧಾಕರ ಶೆಟ್ಟಿ ನಿಧನ

ಹಿರಿಯ ಬಿಜೆಪಿ ಮುಖಂಡ, ಶಾರದಾ ಇಂಟರ್ನ್ಯಾಷನಲ್ ಹೊಟೇಲ್ ಮಾಲೀಕ ಬಿ. ಸುಧಾಕರ ಶೆಟ್ಟಿ ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಸುಧಾಕರ್ ಶೆಟ್ಟಿ ಅವರಿಗೆ ಇಂದು ಬೆಳಗ್ಗೆ ತೀವ್ರವಾಗಿ ಎದು ನೋವು ಕಾಣಿಸಿಕೊಂಡಿದ್ದು ತಕ್ಷಣ ಮನೆಯವರು ಉಡುಪಿಯ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ

ಹಲವು ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸುತ್ತಿದ್ದ ಸುಧಾಕರ್ ಶೆಟ್ಟಿ 2009 ರಿಂದ 12 ರ ವರೆಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು 1999ರಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಯು ಆರ್ ಸಭಾಪತಿ ವಿರುದ್ದ ಸೋಲು ಕಂಡಿದ್ದರು.

2004ರ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಲಭಿಸದ ಹಿನ್ನಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಸಿದ್ದರು. ಬಳಿಕ 2013 ರ ಚುನಾವಣೆಯಲ್ಲಿ ಹಾಲಿ ಶಾಸಕರಾಗಿದ್ದ ರಘುಪತಿ ಭಟ್ ಅವರ ಸಿಡಿ ಗದ್ದಲದಿಂದ ಸ್ಪರ್ಧಿಸಲು ಹಿಂದೆ ಸರಿದ ಹಿನ್ನಲೆಯಲ್ಲಿ ಸುಧಾಕರ್ ಶೆಟ್ಟಿ ಕಣಕ್ಕಿಳಿದಿದ್ದರು. ಆದರೆ ಪ್ರಮೋದ್ ಮಧ್ವರಾಜ್ ವಿರುದ್ದ ಸೋಲು ಅನುಭವಿಸಿದ್ದರು.

01/01/2024 ಅಂದು ಅಂಬಲಪಾಡಿಯಲ್ಲಿ ನಡೆದ ರಂಗಭೂಮಿಯ ನಾಟಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು ಅವರ ಕೊನೆಯ ಕಾರ್ಯಕ್ರಮವಾಗಿತ್ತು.

 
 
 
 
 
 
 
 
 
 
 

Leave a Reply