ಹಡಿಲು ಭೂಮಿ ಕೃಷಿ ಮಾಡಿದ ಗದ್ದೆಗಳಲ್ಲಿ ದೀಪ ಬೆಳಗಿ ಹಬ್ಬ ಆಚರಣೆ

ಶಾಸಕ ಶ್ರೀ ಕೆ ರಘುಪತಿ ಭಟ್ ಅವರ ನೇತೃತ್ವದಲ್ಲಿ ಕೇದಾರೋತ್ಥಾನ ಟ್ರಸ್ಟ್ ಮೂಲಕ  ಹಡಿಲು ಭೂಮಿ ಕೃಷಿ ಮಾಡಿದ ಗದ್ದೆಗಳಲ್ಲಿ ತುಳುನಾಡಿನ ಸಾಂಪ್ರದಾಯಿಕ ದೀಪಾವಳಿ ಆಚರಣೆಯಂತೆ ಗದ್ದೆಗಳಲ್ಲಿ ದೀಪಗಳನ್ನು ಇಟ್ಟು ಹಬ್ಬ ಆಚರಿಸಲಾಗುತ್ತಿದೆ.
 ದಿನಾಂಕ 24-10-2022 ರಂದು ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಭುವನೆಂದ್ರ ಕಿದಿಯೂರ್ ಅವರ ಮನೆ ಬಳಿಯ ಬೈಲಿನ ಗದ್ದೆಗಳಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ದೀಪ ಇಡುವ ಕಾರ್ಯಕ್ರಮದಲ್ಲಿ ಕೇದಾರೋತ್ಥಾನ ಟ್ರಸ್ಟ್ ಅಧ್ಯಕ್ಷರು, ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕೇದಾರೋತ್ಥಾನ ಟ್ರಸ್ಟ್ ನ ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಟ್ರಸ್ಟಿಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಉದ್ಯಮಿಗಳಾದ ಅಕ್ಷಯ್, ಕೇದಾರೋತ್ಥಾನ ಟ್ರಸ್ಟ್ ನ ಕಾರ್ಯಕರ್ತರಾದ ರಿಕೇಶ್ ಕಡೆಕಾರ್, ವಿಕಾಸ್, ಸ್ಥಳೀಯರಾದ ಜೂಲಿಯನ್ ಧಾಂತಿ, ರಂಜಿತ್, ಪುರೋಹಿತರಾದ ಶ್ರೀ ವರ ಕಡೆಕಾರ್ ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply