ಕೊಳಲಗಿರಿ ವಿಶಿಷ್ಟ ರೀತಿಯಲ್ಲಿ ದೀಪಾವಳಿ ಆಚರಣೆ

ಉಡುಪಿ ಜಿಲ್ಲೆಯ ಪ್ರಮುಖ ಸೇವಾ ಸಂಸ್ಥೆಯಾದ ಹೋo ಡಾಕ್ಟರ್ ಫೌಂಡೇಶನ್ ಇದರ ವತಿಯಿಂದ ವಿಶಿಷ್ಟ ರೀತಿಯಲ್ಲಿ ದೀಪಾವಳಿ ಹಬ್ಬವನ್ನು ನ.7 ಮಂಗಳವಾರ ಆಚರಿಸಲಾಯಿತು, ಕೊಳಲಗಿರಿ ಸಂತೆ ಮಾರುಕಟ್ಟೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಮಾಜ ಸೇವಕರಾದ ಗೀತಾ ಶೆಟ್ಟಿ, ರಾಜೇಶ್ ರೈ,ಸಚ್ಚಿದಾನಂದ ಹೆಗ್ಡೆ, ಉದ್ಯಮಿಗಳಾದ ಯದುನಾಥ್, ಸದಾನಂದ ಶೆಟ್ಟಿ ಇವರು ಭಾಗವಹಿಸಿ ಶುಭ ಹಾರೈಸಿದರು. ಸಂಸ್ಥೆಯ ಪ್ರಮುಖರಾದ ಡಾ|| ಶಶಿಕಿರಣ್ ಶೆಟ್ಟಿ ಮಾತನಾಡಿ ಹೋಮ್ ಡಾಕ್ಟರ್ ಫೌಂಡೇಶನ್ ನಡೆದು ಬಂದ ಹಾದಿ ಮತ್ತು ವಿವಿಧ ಕಾನ್ಸೆಪ್ಟ್ ಗಳ ಮೂಲಕ ಸಮಾಜ ಸೇವೆಗಳ ವಿವರಗಳನ್ನು ಸಭೆಗೆ ತಿಳಿಸಿದರು. ವೇದಿಕೆಯಲ್ಲಿ ಡಾII ಸುಮಾ ಎಸ್ ಶೆಟ್ಟಿ ಉಪಸ್ಥಿತರಿದ್ದರು. ರೋಷನ್ ಡಿಸೋಜ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಹಲವಾರು ಅಸಹಾಯಕ ರೋಗಿಗಳಿಗೆ ಸಹಾಯಧನ ಮತ್ತು ಅಕ್ಕಿ ಸೇರಿದಂತೆ ದಿನಬಳಕೆ ವಸ್ತುಗಳನ್ನು ವಿತರಿಸಲಾಯಿತು.ನಂತರ ಶಾರದ ಅಂಧ ಕಲಾವಿದ ತಂಡದಿಂದ ಸುಗಮ ಸಂಗೀತ ಕಾಯ೯ಕ್ರಮ ನಡೆಯಿತು. ಸಾಮೂಹಿಕ ದೀಪ ಬೆಳಗಿಸುದ ರೊಂದಿಗೆ ಕಾಯ೯ಕ್ರಮ ನಡೆಯಿತು.

ಸಂಸ್ಥೆಯ ಸದಸ್ಯರಾದ ರಾಘವೇಂದ್ರ ಪೂಜಾರಿ, ಬಂಗಾರಪ್ಪ, ಸುಜಯ, ರಾಜೇಂದ್ರ, ಗಣೀಶ್, ಸುಂದರ ಪೂಜಾರಿ, ದಯಾನಂದ ಪೂಜಾರಿ, ರಾಘವೇಂದ್ರ ಕವಾ೯ಲು ಮುಂತಾದವರಿದ್ದರು.

 
 
 
 
 
 
 
 
 
 
 

Leave a Reply