ಕನ್ಸ್ಯೂಮರ್ ಡೀಸೆಲ್ ಬಂಕ್ ಗಳಲ್ಲಿ ದರ ನಿಗದಿ ವಿಚಾರದ ಬಗ್ಗೆ ಸೂಕ್ತ ಆದೇಶ ಹೊರಡಿಸಲು ಮನವಿ

ಕರಾವಳಿ ಮೀನುಗಾರರ ವಿವಿಧ ಬೇಡಿಕೆ ಹಾಗೂ ಮೀನುಗಾರಿಕೆ ಬೋಟ್ ಬಳಕೆಯ ಡೀಸೆಲ್ ವಿತರಣೆಯ ಕನ್ಸ್ಯೂಮರ್ ಡೀಸೆಲ್ ಬಂಕ್ ಗಳಲ್ಲಿ ದರ ನಿಗದಿ ವಿಚಾರದ ಬಗ್ಗೆ ಸೂಕ್ತ ಆದೇಶ ಹೊರಡಿಸಿ ಮೀನುಗಾರಿಕೆ ಬೋಟ್ ಗಳಿಗೆ ಸಮರ್ಪಕ ಡೀಸೆಲ್ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷರಾದ ಶ್ರೀ ಜಯ ಸಿ ಕೋಟ್ಯಾನ್ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ ನೇತೃತ್ವದ ಮೀನುಗಾರರ ನಿಯೋಗ ದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪುರಿ, ಕೇಂದ್ರ ಮೀನುಗಾರಿಕೆ ಮತ್ತು ಪಶು ಸಂಗೋಪನೆ ರಾಜ್ಯ ಸಚಿವರಾದ ಡಾ. ಎಲ್. ಮುರುಗನ್, ಬಿಜೆಪಿ ರಾಜ್ಯಾಧ್ಯಕ್ಷರೂ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಜೆ ಯವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ನಿಯೋಗದಲ್ಲಿ ಮಲ್ಪೆ ಯಾಂತ್ರಿಕ ಟ್ರಾಲ್ ದೋಣಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ರಾಮಚಂದ್ರ ಕುಂದರ್, ಮೀನುಗಾರ ಮುಖಂಡರಾದ ಶ್ರೀ ಕಿಶೋರ್ ಡಿ. ಸುವರ್ಣ, ಶ್ರೀ ಸೋಮನಾಥ ಕಾಂಚನ್, ಶ್ರೀ ಸತೀಶ್ ಕುಂದರ್ ಮಲ್ಪೆ ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply