ದಿನೇಶ್ ಗುಂಡೂರಾವ್,ಸಚಿವೆ ಜಯಮಾಲಾ ಪತ್ರಿಕಾಗೋಷ್ಠಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ನಾಳೆ ಉಡುಪಿಯಲ್ಲಿ ಸ್ಪೀಕ್ ಅಪ್ ಕರ್ನಾಟಕ ಕಾರ್ಯ ಕ್ರಮದ ಅಡಿಯಲ್ಲಿ ಬೆಳಿಗ್ಗೆ 11.30 ಗಂಟೆಗೆ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಕೆ.ಪಿ.ಸಿ.ಸಿ.ಯ ಮಾಜಿ ಅಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗುಂಡೂರಾವ್‌ ಮತ್ತು ಮಾಜಿ ಸಚಿವೆ ಜಯಮಾಲಾ ಅವರು ಮಾತನಾಡಲಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು ಈ ಕಾರ್ಯಕ್ರಮ ರೂಪುಗೊಂಡಿದೆ. ರಾಜ್ಯದ 29 ಜಿಲ್ಲೆಗಳಲ್ಲಿ ಸ್ಪೀಕ್ ಅಪ್ ಕರ್ನಾಟಕ ಪತ್ರಿಕಾಗೋಷ್ಠಿಗಳನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

 
 
 
 
 
 
 
 
 

Leave a Reply