ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ದ.ಕ. ಜಿಲ್ಲಾ ಬಿ.ಜೆ.ಪಿ. ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಆಮ್ ಆದ್ಮಿ ಪಕ್ಷ ಉಗ್ರವಾಗಿ ಖ೦ಡಿಸುತ್ತದೆ.
ಮತ್ತು ಮೃತರ ಕುಟುಂಬಕ್ಕೆ ದುಖಃವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ, ಈಗಾಗಲೇ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ಸೇವೆ ಸಲ್ಲಿಸುತ್ತಿದ್ದ ಪ್ರವೀಣ್ ಅವರ ಹತ್ಯೆಯು ಉಭಯ ಜಿಲ್ಲೆಯ ಯುವಕರನ್ನು ಭಯಭೀತಗೊಳಿಸಿದೆ.
ಈ ಕೊಲೆಗೆ ಸಂಬoಧಿಸಿದ ಆರೋಪಿಗಳು ಯಾವುದೇ ಪಕ್ಷ, ಜಾತಿ, ಧರ್ಮಕ್ಕೆ ಸೇರಿದ್ದರು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ದಿವಾಕರ್ ಸನಿಲ್ ಸರಕಾರವನ್ನು ಒತ್ತಾಯಿಸಿದರು.
ಉಭಯ ಜಿಲ್ಲೆಯ ಜನರು ಯಾವುದೇ ಸುಳ್ಳು ವದಂತಿಗಳಿಗೆ ಕಿವಿ ಕೊಡದೆ ಶಾಂತಿ, ಸೌಹಾರ್ಧತೆಯನ್ನು ಕಾಪಾಡಿ. ಯಾವುದೇ ರೀತಿಯ ಅಹಿತಕರ ಘಟನೆಗೆ ಆಸ್ಪದ ಕೊಡದೆ ಸಹಕರಿಸಬೇಕಾಗಿ ವಿನಂತಿಸುತ್ತೇವೆ.