ಚುನಾವಣೆ ಹಿನ್ನೆಲೆ~ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಮುಂದೂಡಿಕೆ

ಉಡುಪಿ:  ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಈ ತಿಂಗಳ 15ರಂದು ನಡೆಯಬೇಕಿದ್ದ ರಾಜ್ಯ ಸಹಕಾರಿ ಸಪ್ತಾಹವನ್ನು ಮುಂದೂಡಲಾಗಿದೆ ಎಂದು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರಿ ಸಚಿವ ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ನವೆಂಬರ್ ತಿಂಗಳಲ್ಲಿ ನಡೆಯ ಬೇಕಿದ್ದ ಸಹಕಾರಿ ಸಪ್ತಾಹವನ್ನು ಜನವರಿ ತಿಂಗಳಲ್ಲಿ ನಡೆಸಲಾಗುವುದು. 

ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ರಾಜಕೀಯ ವ್ಯಕ್ತಿಗಳು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ಕಾರ್ಯಕ್ರಮ ಮುಂದೂಡುತ್ತಿದ್ದೇವೆ ಎಂದರು.

ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ದ.ಕ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ರವಿರಾಜ್ ಹೆಗ್ಡೆ, ದ.ಕ ಮೀನುಗಾರಿಕೆ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ, ಎಸ್. ರಾಜು ಪೂಜಾರಿ,  ಡಾ| ದೇವಿಪ್ರಸಾದ ಶೆಟ್ಟಿ, ಮೊದಲಾದವರಿದ್ದರು.

 
 
 
 
 
 
 
 
 
 
 

Leave a Reply