ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಮಾವೇಶ.

ಉಡುಪಿ:ಇದೇ ಅಕ್ಟೋಬರ್ 9,2022 ರಂದು ಕುಂದಾಪುರದ ಸಹನಾ ಕನ್ವೆನ್ಷನ್ ಸಭಾಂಗಣದಲ್ಲಿ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಜರುಗಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಪಡೆಯುತ್ತಿರುವ ವಿದ್ಯಾರ್ಥಿಗಳ ಅರ್ಧ ದಿನದ ಶೈಕ್ಷಣಿಕ ಸಮಾವೇಶ ಸಂಸ್ಥೆಯ ಕಚೇರಿಯಲ್ಲಿ ಇಂದು ಜರಗಿತು.ಸಂಪನ್ಮೂಲ ವ್ಯಕ್ತಿಗಳಾಗಿ ಮಣಿಪಾಲ ಡಾಟ್ನೆಟ್ ಇದರ ಸಂಸ್ಥಾಪಕರಾದ ಡಾ.ಯು.ಸಿ. ನಿರಂಜನ್ ಹಾಗೂ ಎಮ್ ಐ.ಟಿ. ಉಪನ್ಯಾಸಕರಾದ ಡಾ.ಸಂತೋಷ್ ರಾವ್ ಇವರು ಪಾಲ್ಗೊಂಡು ಮಾರ್ಗದರ್ಶನ ನೀಡಿದರು. ಸಂಸ್ಥೆ ಅಧ್ಯಕ್ಷ ಎಂ.ಗಂಗಾಧರ ರಾವ್ ಉಪಾಧ್ಯಕ್ಷ ವಿ.ಜಿ.ಶೆಟ್ಟಿ ಕಾರ್ಯದರ್ಶಿ ಮುರಲಿ ಕಡೆಕಾರ್ ಜತೆ ಕಾರ್ಯದರ್ಶಿ ಪ್ರೊ. ನಾರಾಯಣ ಎಂ. ಹೆಗಡೆ ,ಅಶೋಕ ಎಂ,ನಟರಾಜ ಉಪಾಧ್ಯ, ಮಂಜುನಾಥ,ಸುದರ್ಶನ ಬಾಯಿರಿ ಭಾಗವಹಿಸಿದರು. ಬೆಂಗಳೂರಿನಲ್ಲಿ ವಿದ್ಯಾರ್ಜನೆಗೈಯುತ್ತಿರುವವರನ್ನು ಹೊರತುಪಡಿಸಿ ಜಿಲ್ಲೆಯ ಎಂಬತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

 
 
 
 
 
 
 
 
 
 
 

Leave a Reply