ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರಿಗೆ ಸನ್ಮಾನ

ಉಡುಪಿ: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಜನತೆಯ ಆರೋಗ್ಯ ಸಂರಕ್ಷಣೆಯಲ್ಲಿ ಸೇವಾ ನಿರತರಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರಾದ ಪ್ರವೀಣ,ವಿಶಾಲ ನಾಯ್ಕ್ ಹಾಗೂ ಆಶಾ ಕಾರ್ಯಕರ್ತೆಯರಾದ ಸರಸ್ವತಿ ಕೆ. ಶ್ರೀಯಾನ್, ಗಾಯತ್ರಿ ಮತ್ತು ನಿಶಾ ಕಿದಿಯೂರು ರವರನ್ನು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ್ ಅಂಬಲಪಾಡಿ ದೇವಳದಲ್ಲಿ ಶಾಲು ಹೊದಿಸಿ ಸನ್ಮಾನಿಸಿದರು.

ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಯೇಶನ್ ಅಧ್ಯಕ್ಷ ವಾಮನ್ ಪಾಲನ್, ಕಾರ್ಯದರ್ಶಿ ಮೇಘ, ಯುವಕ ಮಂಡಲ(ರಿ.) ಅಧ್ಯಕ್ಷ ಹರೀಶ್ ಪಾಲನ್, ಕೋವಿಡ್-19 ಹೆಲ್ಪ್ ಡೆಸ್ಕ್ ಅಂಬಲಪಾಡಿ ಇದರ ವಿವಿಧ ಸೇವಾ ಪ್ರಮುಖರಾದ ಶಿವಕುಮಾರ್ ಅಂಬಲಪಾಡಿ, ಅಜಿತ್ ಕಪ್ಪೆಟ್ಟು, ಸತೀಶ್ ಭಂಡಾರಿ ಮತ್ತು ಹರೀಶ್ ಅಂಬಲಪಾಡಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply