ಮಣಿಪಾಲ: ಯುವಕರ ಸಮಯ ಪ್ರಜ್ಞೆಯಿಂದ ಭಾರಿ​ ಬೆಂಕಿ​ ಅನಾಹುತದಿಂದ ಪಾರು

ಮಣಿಪಾಲ : ಸಮೀಪದ ದುಗ್ಲಿ ಪದವು ಎಂಬಲ್ಲಿ ತಡರಾತ್ರಿ ಸುಮಾರಿಗೆ ಬೆಂಕಿಬಿದ್ದಿದ್ದು​ ​ಯುವಕರ ಸಮಯ​ ​ಪ್ರಜ್ಞೆಯಿಂದ ಬಹಳಷ್ಟು ಜೀವ ಹಾನಿ ಮತ್ತು ಆಸ್ತಿಪಾಸ್ತಿ ರಕ್ಷಣೆಯಾಗಿದೆ.​ ಇಂದು ರಾತ್ರಿ ಸುಮಾರು ಹತ್ತು ಗಂಟೆ ಸುಮಾರಿಗೆ ಮಣಿಪಾಲ ಅಲೆವೂರು ರಸ್ತೆಯ ದುಗ್ಲಿ ಪದವು ಎಂಬಲ್ಲಿ ಬೆಂಕಿಬಿದ್ದಿದ್ದು ​ಇದು ಬಹಳಷ್ಟು ಜನವಸತಿ ​ಇರುವ ​ಪ್ರದೇಶ.

ಇದೇ ಸಂದರ್ಭದಲ್ಲಿ  ರಸ್ತೆಯಲ್ಲಿ ಬರುತ್ತಿರುವ ಬೈಕ್ ಸವಾರರಾದ ಅಲೆವೂರಿನ ಜಲೇಶ್ ಶೆಟ್ಟಿ ಮತ್ತು ಕುಕ್ಕಿಕಟ್ಟೆಯ ನವೀನ್ ಸೇರಿಗಾರ್ ಕೂಡಲೇ ಅಗ್ನಿಶಾಮಕ ದಳಕ್ಕೆ ತಿಳಿಸಿ ಸ್ಥಳೀಯರನ್ನು ಎಬ್ಬಿಸಿ ಬೆಂಕಿಯನ್ನು ನಂದಿಸಿದರು​. ​ ಯುವಕರ ಸಮಯಪ್ರಜ್ಞೆಯಿಂದ ಬಹಳ ದೊಡ್ಡ ಅನಾಹುತ ತಪ್ಪಿದೆ​ ಎಂದು ಸ್ಥಳೀಯರು ಆಡಿಕೊಳ್ತಿದ್ದಾರೆ ​

 
 
 
 
 
 
 
 
 
 
 

Leave a Reply