ಮೀನುಗಾರರ ಸಂಕಷ್ಟ ಪರಿಹಾರ ನಿಧಿ ಶುಲ್ಕ ವಸೂಲಿಗೆ ಸೂಚನೆ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಮೀನುಗಾರರ ಸಂಕಷ್ಟ ಪರಿಹಾರ ನಿಧಿಗೆ ಅನುದಾನ ಸಂಗ್ರಹಿಸಲು ಸರ್ಕಾರವು ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ ನಿಗಧಿಪಡಿಸುವ ರಾಜ್ಯ ಮಾರಾಟಕರ ದರದ ಶೇ. 1.5 ರ ಮೊತ್ತವನ್ನು ಡೀಸೆಲ್ ವಿತರಣೆ ಮಾಡುವ ಸಮಯದಲ್ಲಿ ಪ್ರತಿ ದೋಣಿಗೆ ನಿಗಧಿಪಡಿಸಿರುವ ಡೀಸೆಲ್ ಪ್ರಮಾಣಕ್ಕನುಗುಣವಾಗಿ ಮೀನುಗಾರಿಕೆ ದೋಣಿ ಮಾಲೀಕರಿಂದ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯ ಶುಲ್ಕದ ವಸೂಲಾತಿಯನ್ನು ತಕ್ಷಣ ಪ್ರಾರಂಭಿಸಿ,
ಆ ಮೊತ್ತವನ್ನು ಡೀಸೆಲ್ ಬಂಕ್ ಮಾಲಿಕರು ಮೀನುಗಾರರ ಸಂಕಷ್ಟ ಪರಿಹಾರ ನಿಧಿಗಾಗಿ ಮೀನುಗಾರಿಕೆ ನಿರ್ದೇಶಕರು, ಬೆಂಗಳೂರು
ಹೆಸರಿನ ಬ್ಯಾಂಕ್ ಖಾತೆಗೆ ಜಮಾ ಮಾಡುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply