ಬೆಂಗಳೂರಿನ ಕೆ.ಆರ್.ಮಾರ್ಕೆಟ್ ಫ್ಲೈಓವರ್ (K.R. Market Flyover) ಮೇಲೆ ಬಂದು ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾಗಬಾವಿಯ ಯೂಟ್ಯೂಬ್ ಚಾನಲ್ ಕಚೇರಿಯಲ್ಲಿ ಹಣ ಎಸೆದ ವ್ಯಕ್ತಿ ಇರುವುದನ್ನು ಖಚಿತಪಡಿಸಿ ಕಚೇರಿಗೆ ಎಂಟ್ರಿ ಕೊಟ್ಟು ವಶಕ್ಕೆ ಪಡೆದಿದ್ದಾರೆ.
ಸದ್ಯ ಹಣ ಎಸೆದ ವ್ಯಕ್ತಿ ಅರುಣ್ ಎಂದು ತಿಳಿದುಬಂದಿದ್ದು, ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.
ಫ್ಲೈಓವರ್ನಿಂದ ಹಣ ಎಸೆದ ಘಟನೆ ಸಂಬಂಧ ಕರ್ನಾಟಕ ಪೊಲೀಸ್ ಕಾಯ್ದೆ 92ಡಿ, ಐಪಿಸಿ 283ರ ಅಡಿ ಎನ್ಸಿಆರ್ ಪ್ರಕರಣ ದಾಖಲಿಸಿದ ಕೆ.ಆರ್.ಮಾರ್ಕೆಟ್ ಠಾಣಾ ಪೊಲೀಸರು, ಕಾರಣ ನೀಡುವಂತೆ ನಾಗರಭಾವಿ ಯಲ್ಲಿರುವ ಹಣ ಎಸೆದ ಅರುಣ್ ನಿವಾಸಕ್ಕೆ ನೋಟಿಸ್ ಜಾರಿ ಕಳುಹಿಸಿದ್ದರು.
ಅದಾಗ್ಯೂ ಉತ್ತರಿಸದಿದ್ದಾಗ ಅರುಣ್ ನಾಗರಭಾವಿಯಲ್ಲಿರುವ ಯೂಟ್ಯೂಬ್ ಕಚೇರಿಯಲ್ಲಿ ಇರುವುದು ಪೊಲೀಸರಿಗೆ ಖಚಿತವಾಗಿದೆ. ಅದರಂತೆ ಕಚೇರಿಗೆ ತೆರಳಿದ ಪೊಲೀಸರು ಅರುಣ್ ಜೊತೆ ಮಾತುಕತೆ ನಡೆಸಿ ಠಾಣೆಗೆ ಕರೆದೊಯ್ದಿದ್ದಾರೆ.