ಹಿರಿಯಡ್ಕ ಸಂಸ್ಕೃತಿ ಸಿರಿ ಟ್ರಸ್ಟ್ ಏರ್ಪಡಿಸಿದ್ದ ಶಿವರಾಮ ಕಾರಂತರ ಮೂಕಜ್ಜಿಯ ಕನಸುಗಳು ಕಾದಂಬರಿ ಆಧಾರಿತ ಸಿನಿಮಾ ವಿಮರ್ಶೆ ಸ್ಪರ್ಧೆಯಲ್ಲಿ ಉಡುಪಿ ಅಜ್ಜರಕಾಡಿನ ಜಿ.ಶಂಕರ್ ಸರಕಾರಿ ಮಹಿಳಾ ಕಾಲೇಜಿನ ಬಿ ಎಸ್ಸಿ ವಿದ್ಯಾರ್ಥಿನಿ ಅನ್ನಪೂರ್ಣ ಪ್ರಥಮ ಬಹುಮಾನ (ರೂ 2000) ಪಡೆದಿದ್ದಾರೆ.
ಹೊನ್ನಾವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ ಕಾಮ್ ವಿದ್ಯಾರ್ಥಿ ಸಚಿನ್ ಶೇಟ್, ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನ ಬಿ ಎಸ್ಸಿ ವಿದ್ಯಾರ್ಥಿನಿ ಅಶ್ವಿನಿ ಶೆಟ್ಟಿ ದ್ವಿತೀಯ ಬಹುಮಾನ (ರೂ 1500) ಪಡೆದಿದ್ದಾರೆ.
ಐಶ್ವರ್ಯ (ಸರಕಾರಿ ಕಾಲೇಜು ಹೊನ್ನಾವರ) ಮಲ್ಲಿಕಾ (ಸರಕಾರಿ ಕಾಲೇಜು ಹೆಬ್ರಿ ) ಪ್ರಿಯಾ (ಸರಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿ) ಇವರು ತೃತೀಯ ಬಹುಮಾನ ಪಡೆದಿದ್ದಾರೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳಿಗಾಗಿ ಈ ಸ್ಪರ್ಧೆ ಏರ್ಪಡಿಸಲಾಗಿತ್ತು ಎಂದು ಸಂಸ್ಕೃತಿ ಸಿರಿ ಟ್ರಸ್ಟ್ ಮುಖ್ಯಸ್ಥರು ಮುರಳೀಧರ ಉಪಾಧ್ಯ ಹಿರಿಯಡ್ಕ ತಿಳಿಸಿದ್ದಾರೆ.