ಕಾರು ತೊಳೆಯಲು ಕಾಲುವೆಗೆ ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಅಮಾವಾಸ್ಯೆ ಪೂಜೆಯ ಹಿನ್ನೆಲೆಯಲ್ಲಿ ಕಾರು ತೊಳೆಯಲೆಂದು ಕಾಲುವೆಗೆ ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ.
 
ಅರುಣ್ ಪಡೆಸೂರ (25) ಹಾಗೂ ಹನುಮಂತ ಮಜ್ಜಿಗೆ (30) ನಾಪತ್ತೆಯಾದ ಯುವಕರು ಮೃತಪಟ್ಟವರು ಎಂದು ತಿಳಿದು ಬಂದಿದೆ. ಯುವಕರು ಮಲಪ್ರಭಾ ನದಿಯ ಕಾಲುವೆಗೆ ಕಾರು‌ ತೊಳೆಯಲೆಂದು ಹೋಗಿದ್ದ ವೇಳೆ ಇಬ್ಬರೂ ಕಾಲುವೆಯಲ್ಲಿ ಕೊಚ್ಚಿ ಹೋಗಿರುವ ಕುರಿತು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
 
ಯುವಕರ ಪತ್ತೆಗಾಗಿ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.  ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
 
 
 
 
 
 
 
 

Leave a Reply