ಉಡುಪಿ: ಮಹಿಳೆಯರು ಮಹಿಳಾಭಿವೃದ್ಧಿ ಮತ್ತು ಕೌಶಲಾಭಿವೃದ್ದಿ ಚಟುವಟಿಕೆಗಳಲ್ಲಿ ತಮ್ಮನ್ನುಸಕ್ರಿಯವಾಗಿ ತೊಡಗಿಸಿಕೊಂಡಲ್ಲಿ ಮಾತ್ರ ಸಮಾಜದಲ್ಲಿ ಯಶಸ್ವಿಯಾಗಲು ಸಾಧ್ಯಎಂದು ಮಣಿಪಾಲದ ಸೋನಿಯಾ ಕ್ಲಿನಿಕ್ ವೈದ್ಯಾಧಿಕಾರಿ ಡಾ.ಗಿರಿಜಾರಾವ್ ಹೇಳಿದರು.
ಅವರು ಇಂದು ರೆಡ್ಕ್ರಾಸ್ ಭವನದಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದರು. ರೆಡ್ಕ್ರಾಸ್ ಸಂಸ್ಥೆಯುಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಮಹಿಳೆಯರಿಗೆ ಅಗತ್ಯ ವಸ್ತುಗಳನ್ನು ಪೂರೈಸುವ ಮೂಲಕ ಸಮಾಜದಲ್ಲಿ ಉತ್ತಮ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಇಂತಹ ಸಂಸ್ಥೆಗಳಲ್ಲಿ ಮಹಿಳೆಯರು ತಮ್ಮನ್ನು ಪರಿಪೂರ್ಣವಾಗಿ ತೊಡಗಿಸಿ ಕೊಂಡಾಗ ಮಾತ್ರ ಸಮಾಜದ ಮುನ್ನೆಲೆಗೆ ಬರಲು ಸಾಧ್ಯವಾಗುತ್ತದೆ ಎಂದರು.
ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ವಿದ್ಯಾರತ್ನ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು, ಮತ್ತಿತ್ತರು ಉಪಸ್ಥಿತರಿದ್ದರು. ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ. ಅಶೋಕ್ ಕುಮಾರ್ ಸ್ವಾಗತಿಸಿ, ಡಾ.ಅರವಿಂದ್ ನಾಯ್ಕ್ಅಮ್ಮುಂಜೆ
ವಂದಿಸಿ, ಕೆ.ಜಯರಾಮ್ ಸಾಲಿಗ್ರಾಮ ನಿರೂಪಿಸಿದರು.