ರಾಷ್ಟ್ರೀಯ ಏಕತಾ ದಿನಾಚರಣೆ

ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿನ ಪ್ರೌಢಶಾಲಾ ವಿಭಾಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಆಚರಿಸಲಾಯಿತು. ಕುಮಾರಿ ಅನಘಾ ಹೊಳ್ಳ ಸರ್ದಾರ್ ವಲ್ಲಭ ಭಾಯಿ ಪಟೇಲ್ ಕುರಿತು ಮಾತನಾಡಿದಳು. ಶಿಕ್ಷಕ ಶೇಖರ ಬೋವಿ ರಾಷ್ಟ್ರೀಯ ಏಕತಾ ದಿನದ ಮಹತ್ವದ ಕುರಿತು ಮಾತನಾಡಿದರು

ಮುಖ್ಯ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ಅಧ್ಯಕ್ಷತೆ ವಹಿಸಿ ಏಕತಾ ಪ್ರತಿಜ್ಞೆಯನ್ನು ಬೋಧಿಸಿದರು ಶಿಕ್ಷಕ ವಸಂತ ಜೋಗಿ ಕಾರ್ಯಕ್ರಮ ನಿರೂಪಿಸಿದರು. ವಿಜ್ಞಾನ ಶಿಕ್ಷಕಿ ಇಂದಿರಾ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆಲ್ ಕಾರ್ಗೋ ಸಂಸ್ಥೆಯಿಂದ ಕೊಡ ಮಾಡಲ್ಪಟ್ಟ 86000 ರೂಪಾಯಿಗಳ ವಿದ್ಯಾರ್ಥಿ ವೇತನದ ಚೆಕ್ಕುಗಳನ್ನು 30 ಜನ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

 
 
 
 
 
 
 
 
 
 
 

Leave a Reply