ಶತಾಯುಷಿ ಹಿರಿಯಡ್ಕ ಗೋಪಾಲ್ ರಾವ್ ಅವರ ನಿವಾಸಕ್ಕೆ ಸಚಿವ ಕೋಟ ಭೇಟಿ

ಶನಿವಾರ ನಿಧನರಾದ ಮದ್ದಳೆಯ ಮಾಂತ್ರಿಕ ಶತಾಯುಷಿಯಾಗಿದ್ದ ಹಿರಿಯಡ್ಕ ಗೋಪಾಲ್ ರಾವ್ ಅವರ ನಿವಾಸಕ್ಕೆ ಭೇಟಿ ನೀಡಿದ, ರಾಜ್ಯ ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಗೋಪಾಲರಾವ್ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಯಕ್ಷಗಾನದ ಅತ್ಯಂತ ಹಿರಿಯ ಕಲಾವಿದ್ದರಾಗಿದ್ದ ಹಿರಿಯಡ್ಕ ಗೋಪಾಲ್ ರಾವ್ ಅವರ ನಿಧನ ಯಕ್ಷಗಾನ ಲೋಕಕ್ಕೆ ತುಂಬಲಾರದ ನಷ್ಠವಾಗಿದೆ, ಮೃತರ ಆತ್ಮಕೆ ಶಾಂತಿ ದೊರೆಯಲ್ಲಿ ಮತ್ತು ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ಯನ್ನು ಭಗವಂತ ನೀಡಲಿ ಎಂದು ಹೇಳಿದರು. ಹಿರಿಯಡ್ಕ ಗೋಪಾಲರಾವ್ ಅವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಮತ್ತು ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅವರಿಗೆ 101 ವರ್ಷ ವಯಸ್ಸಾಗಿತ್ತು.

 
 
 
 
 
 
 
 
 
 
 

Leave a Reply