ದೇಶದ ನೆಚ್ಚಿನ ಪ್ರಧಾನಿ ಮೋದಿಜಿಯವರಿಗೆ ದೀರ್ಘಾಯುಷ್ಯಕ್ಕಾಗಿ ಪೂಜೆ

ಉಡುಪಿ ಗ್ರಾಮಾಂತರ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ,
ಬ್ರಹ್ಮಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ  ನೆರವೇರಿಸಿ, ಪ್ರಾರ್ಥಿಸಿಕೊಳ್ಳಲಾಯಿತು.*

ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿ  ಸಂದರ್ಭದಲ್ಲಿ ನಿಗದಿತ ಭದ್ರತಾ ಸುರಕ್ಷಾ ಕ್ರಮಗಳನ್ನು ಕೈಗೊಳ್ಳದೇ ಕೀಳು ರಾಜಕೀಯ ಪ್ರದರ್ಶಿಸಿರುವ ಪಂಜಾಬಿನ ಕಾಂಗ್ರೆಸ್ ಸರಕಾರದ ನಡೆಯನ್ನು ಉಡುಪಿ ಗ್ರಾಮಾಂತರ ಬಿಜೆಪಿ ಮಂಡಲದ  ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸಿ, ತಪ್ಪಿತಸ್ಥರ ವಿರುದ್ಧ ಉಗ್ರ ಕ್ರಮವನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಉಡುಪಿ ಗ್ರಾಮಾಂತರ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವಸಂತಿ ಎಸ್. ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಶೋಭಾ ಪೂಜಾರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ನಳಿನಿ ಪ್ರದೀಪ ರಾವ್, ಮಂಡಲದ ಉಪಾಧ್ಯಕ್ಷರಾದ ರಘುರಾಮ ಶೆಟ್ಟಿ, ಅಕ್ರಮ ಸಕ್ರಮ ಮಂಡಳಿಯ ಸದಸ್ಯರಾದ ಉಪ್ಪೂರು ರಾಜು ಪೂಜಾರಿ, ಬ್ರಹ್ಮಾವರ ವ್ಯ.ಸ. ಬ್ಯಾಂಕ್ ನಿರ್ದೇಶಕರಾದ ಎಚ್. ಸದಾನಂದ ಪೂಜಾರಿ,

ತಾಲೂಕು  ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ, ಚಾಂತಾರು ಪಂಚಾಯತ್ ಅಧ್ಯಕ್ಷರಾದ ಮೀರಾ ಸದಾನಂದ ಪೂಜಾರಿ, ಉಪಾಧ್ಯಕ್ಷರಾದ ಲಕ್ಷ್ಮೀ, ಹಂದಾಡಿ ಪಂಚಾಯತ್ ಅಧ್ಯಕ್ಷರಾದ ಉದಯ ಪೂಜಾರಿ, ಪಂಚಾಯತ್ ಸದಸ್ಯರಾದ  ಬೇಬಿ ಪೂಜಾರಿ, ಹೇಮಾ ಅಶೋಕ್, ನಾಗವೇಣಿ, ಪಕ್ಷದ ಪ್ರಮುಖರಾದ ಚಂದ್ರಶೇಕರ ಬೈಕಾಡಿ, ಮತ್ತು ಮಂಡಲದ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply