ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಸಮವಸ್ತ್ರ ವಿತರಣೆ

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪ್ರೌಢಶಾಲಾ ಕನ್ನಡ ಮಾಧ್ಯಮ ವಿಭಾಗದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಇಲ್ಲಿನ ಅಧ್ಯಾಪಕರ ಆರ್ಥಿಕ ಸಹಾಯದೊಂದಿಗೆ ಪ್ರತಿವರ್ಷದಂತೆ ಈ ಬಾರಿ ಕೂಡ ಉಚಿತವಾಗಿ ಸಮವಸ್ತ್ರಗಳನ್ನು ನೀಡಲಾಯಿತು.

ಜಿ. ಎಸ್. ವಿ ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್. ಗಣೇಶ್ ಕಾಮತ್ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪ್ರೌಢಶಾಲಾ ಉಪಪ್ರಾಂಶುಪಾಲರಾದ ಉಮೇಶ್ ಕರ್ಣಿಕ್ ಮತ್ತು ಅಧ್ಯಾಪಕರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಶಾಲಾ ಆರಂಭದ ದಿನಗಳಲ್ಲಿ ಇಲ್ಲಿನ ಅಧ್ಯಾಪಕ ವೃಂದ ವಿದ್ಯಾರ್ಥಿಗಳ ದಾಖಲಾತಿ ಶುಲ್ಕವನ್ನು ಭರಿಸಿ ಉಚಿತವಾಗಿ ನೋಟು ಪುಸ್ತಕಗಳನ್ನು ಕೂಡ ವಿತರಿಸಿತ್ತು.

 
 
 
 
 
 
 
 
 
 
 

Leave a Reply