ಕಾಪು: ಪಕೀರಣಕಟ್ಟೆಯ ಗುಜಿರಿ ಅಂಗಡಿಯಲ್ಲಿನ ಸ್ಪೋಟ ಪ್ರಕರಣವನ್ನು ಸಮಗ್ರ ತನಿಖೆ ನಡೆಸುವಂತೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಅಗ್ರಹಿಸಿದ್ದಾರೆ.
ಈ ಘಟನೆಯಿಂದ ಕಾಪು ಪರಿಸರದ ನಾಗರಿಕರು ಆತಂಕಕ್ಕೀಡಾಗಿದ್ದು, ಜನ ವಸತಿ ಪ್ರದೇಶದಲ್ಲಿ ನಡೆದ ಈ ಘಟನೆ ಬಗ್ಗೆ ಜನಸಾಮಾನ್ಯರಲ್ಲಿ ಅನುಮಾನ ಹಾಗೂ ಆತಂಕ ಮೂಡಿಸಿದೆ ಪೊಲೀಸ್ ಇಲಾಖೆ ಕೂಲಂಕುಷ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.