ಭಾಷೆ ಬೆಳವಣಿಗೆಗೆ ಹೊಸ ಸಾಧ್ಯತೆಗಳ ಪ್ರಯೋಗ ಅತ್ಯಗತ್ಯ- ರಾಮಚಂದ್ರ ಐತಾಳ್ ಗುಂಡ್ಮಿ

ಕೋಟ : ಭಾಷೆಗಳ ಬೆಳವಣಿಗೆಗೆ ಹೊಸ ಸಾಧ್ಯತೆಗಳ ಪ್ರಯೋಗ ಅತ್ಯಗತ್ಯ, ಭಾಷೆಯ ಬಗ್ಗೆ ಕೀಳರಿಮೆ ತೋರದೆ ಅವಕಾಶವಿದ್ದಾಗ ಸಮರ್ಪಕವಾಗಿ ನಮ್ಮ ಭಾಷೆ ಬಳಸಿದಾಗ ಉನ್ನತೀಕರಣ ಸಾಧ್ಯ. ಕುಂದಾಪ್ರ ಭಾಷೆಗೆ ತನ್ನದೇ ಆದ ಹಿರಿಮೆವಿದೆ. ಗಮ್ಜಾಲ್ ತಂಡದವರ ಹರಟೆ ಸರಣಿ ಕಾರ್ಯಕ್ರಮ ಕುಂದಾಪ್ರ ಭಾಷೆಯ ಸೊಗಡನ್ನು ಮೂಲೆ ಮೂಲೆಗೂ ಪಸರಿಸಲು ಒಂದು ಉತ್ತಮ ಪ್ರಯತ್ನ, ಇವರ ಕಾರ್ಯ ಶ್ಲಾಘನೀಯ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಬ್ರಹ್ಮಾವರ ತಾಲೂಕು ಅಧ್ಯಕ್ಷ ರಾಮಚಂದ್ರ ಐತಾಳ್ ಅವರು ಹೇಳಿದರು.
ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ|| ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಯು ಚಾನೆಲ್ ಸಹಯೋಗದಲ್ಲಿ ಕುಂದಾಪ್ರ ಭಾಷೆಯ ಹರಿವಿಗಾಗಿ ಸರಣಿ ಕಾರ್ಯಕ್ರಮ ಹರಟೆ ಗಮ್ಜಾಲ್-೨೦೨೨(ಮಾತಿನ ತಿರ್ಗಣಿ) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, sಸಾಹಿತ್ಯಿಕ-ಸಾಂಸ್ಕೃತಿಕ ಚಿಂತಕರಾದ ಜ್ಯೋತಿ ಸಾಲಿಗ್ರಾಮ, ಸುಮಿತ್ರ ಐತಾಳ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಸ್ವಾಗತಿಸಿ ಪ್ರಸ್ತಾಪಿಸಿದರು, ಟ್ರಸ್ಟಿ ಸತೀಶ್ ವಡ್ಡರ್ಸೆ ನಿರೂಪಿಸಿದರು.

ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ|| ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಯು ಚಾನೆಲ್ ಸಹಯೋಗದಲ್ಲಿ ಕುಂದಾಪ್ರ ಭಾಷೆಯ ಹರಿವಿಗಾಗಿ ಸರಣಿ ಕಾರ್ಯಕ್ರಮ ಹರಟೆ ಗಮ್ಜಾಲ್-೨೦೨೨(ಮಾತಿನ ತಿರ್ಗಣಿ) ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಬ್ರಹ್ಮಾವರ ತಾಲೂಕು ಅಧ್ಯಕ್ಷ ರಾಮಚಂದ್ರ ಐತಾಳ್ ಉದ್ಘಾಟಿಸಿದರು. ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, sಸಾಹಿತ್ಯಿಕ-ಸಾಂಸ್ಕೃತಿಕ ಚಿಂತಕರಾದ ಜ್ಯೋತಿ ಸಾಲಿಗ್ರಾಮ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply