“A Journey From Campus to Corporate” ನ ಬಗ್ಗೆ ವಿಶೇಷ ಉಪನ್ಯಾಸ

ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಉಡುಪಿಯಲ್ಲಿ ದಿನಾಂಕ 03-05-2024 ಶುಕ್ರವಾರದಂದು ಮಂಗಳೂರಿನ ವ್ಯಕ್ತಿತ್ವ ವಿಕಸನ ಕೇಂದ್ರದ ನಿರ್ದೇಶಕರಾದ ಪ್ರೊ.
ರೊನಾಲ್ಡ್ ಪಿಂಟೋರು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ A Journey From Campus to
Corporate ನ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ, ಸಂದರ್ಶನದ ಪೂರ್ವ ಸಿದ್ಧತೆಗಳ ಬಗ್ಗೆ ಸವಿವರವಾದ ಮಾಹಿತಿಗಳನ್ನು ನೀಡಿದರು.

 

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಭಾಸ್ಕರ್ ಶೆಟ್ಟಿ ಎಸ್ ಯವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದು ವಿದ್ಯಾರ್ಥಿನಿಯರು ದೇಶದ ಪ್ರತಿಷ್ಠಿತ ಹುದ್ದೆಗಳನ್ನು ಗಳಿಸುವಂತಾಗಲಿ ಎಂದು ಹಾರೈಸಿದರು. ಈ ಕಾರ್ಯಕ್ರಮದ ಸಂಯೋಜಕರಾದ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರು ಪ್ರೊ. ಕೆ. ಶ್ರೀಧರಪ್ರಸಾದ ಇವರು ಅತಿಥಿಗಳನ್ನು ಪರಿಚಯಿಸಿ, ಕಾರ್ಯಕ್ರಮದ
ಪ್ರಾಮುಖ್ಯತೆಯನ್ನು ಪ್ರಸ್ತುತ ಪಡಿಸಿದರು.

 

ಈ ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಅಶೋಕ ಭಂಡಾರಿ, ಡಾ. ರಾಮದಾಸ ಪ್ರಭು ಹಾಗೂ ಡಾ. ರವೀಶ ಎಂ ಉಪಸ್ಥಿತರಿದ್ದರು. ಕು. ವೈಷ್ಣವಿ ಮತ್ತು ಕು. ವಿಶಾಲ ಪ್ರಾರ್ಥನೆಯೊಂದಿಗೆ ಆರಂಭವಾದ ಈ ಕಾರ್ಯಕ್ರಮವನ್ನು ಕು. ಪ್ರಜ್ಞಾ ನಿರೂಪಿಸಿ, ಕು. ಮೆಲಿಷಾ ವಂದಿಸಿದರು.

 
 
 
 
 
 
 
 
 
 
 

Leave a Reply