ಹಡಿಲು ಭೂಮಿ ಕೃಷಿ ಅಂದೋಲನ”ದ ಗದ್ದೆಯ ಕಳೆ ಕೀಳುವ ಕಾರ್ಯ -ಶಾಸಕ ರಘುಪತಿ ಭಟ್ ವೀಕ್ಷಣೆ

ಹಡಿಲು ಭೂಮಿ ಕೃಷಿ ಆಂದೋಲನ”ದಡಿ ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೆಲವು ಭಾಗಗಳಲ್ಲಿ ನಾಟಿ ಕಾರ್ಯ ಪೂರ್ಣಗೊಂಡ ಗದ್ದೆಗಳಲ್ಲಿ ನೇಜಿಯ ನಡುವೆ ಇತರ ಕಳೆಗಳು ಬೆಳೆಯುತ್ತಿದ್ದು, ಈ ಭಾಗದಲ್ಲಿ ಇಂದಿನಿಂದ ಪೈರಿನ ನಡುವೆ ಬೆಳೆದ ಕಳೆಗಳನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದ್ದು, ಶಾಸಕ  ಕೆ ರಘುಪತಿ ಭಟ್ ಅವರು ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಉಡುಪಿ ನಗರ ಬಿಜೆಪಿ ಉಪಾಧ್ಯಕ್ಷ ಪ್ರದೀಪ್ ಚಂದ್ರ ಕುತ್ಪಾಡಿ, ನಗರಸಭೆಯ ಸದಸ್ಯಬಾಲಕೃಷ್ಣ ಶೆಟ್ಟಿ, ಶಕ್ತಿ ಕೇಂದ್ರದ ಸಂಚಾಲಕರಾದ ಉಮೇಶ್, ಸ್ಥಳೀಯ ರಿಕೇಶ್,  ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ ಹಾಗೂ ಸ್ಥಳೀಯ ಕೃಷಿಕರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply