​​ ಪರ್ಕಳ​ದಲ್ಲಿ ಹಡಿಲು ಭೂಮಿ ಉಳುಮೆಗೆ​ ​​ಚಾಲನೆ

ಉಡುಪಿ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ “ಹಡಿಲು ಭೂಮಿ ಕೃಷಿ ಆಂದೋಲನ” ಅಡಿಯಲ್ಲಿ ಈಗಾಗಲೇ ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ಭಾನುವಾರ  ಸ್ಥಳೀಯ ಜನಪ್ರತಿನಿಧಿಗಳು, ಹಿರಿಯರು, ಭೂ ಮಾಲಕರೊಂದಿಗೆ ಶಾಸಕ ಕೆ. ರಘುಪತಿ ಭಟ್ ಅವರು ಪರ್ಕಳ ವಾರ್ಡಿನಲ್ಲಿ ಭೂಮಿ ಪೂಜೆ ಸಲ್ಲಿಸಿ ಹಾಲನ್ನು ಅರ್ಪಿಸುವ ಮೂಲಕ ಹಡಿಲು ಕೃಷಿ ಭೂಮಿಯ ಉಳುಮೆಗೆ ಸಾಂಕೇತಿಕವಾಗಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಉತ್ಸಾಹದಿಂದ ಸ್ಥಳೀಯ ಕೃಷಿಕರು, ಊರಿನ ಹಿರಿಯರು ಈ ಆಂದೋಲನಕ್ಕೆ ಕೈಜೋಡಿಸಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಸ್ಥಳೀಯ ನಗರಸಭಾ ಸದಸ್ಯ  ಮಂಜುನಾಥ್ಮಣಿಪಾಲ್, ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಡಿಸೋಜ, ಸ್ಥಳೀಯರಾ​​ದ ರಂಜಿತ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply