ಅಂಗವಿಕಲರಿಗೆ ಶಾಸಕ ರಘುಪತಿ ಭಟ್ ತ್ರಿಚಕ್ರ ವಾಹನ ಹಸ್ತಾಂತರ

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ 2021-22 ನೇ ಸಾಲಿನ “ಅಂಗವಿಕಲರ ಶ್ರೇಯೋಭಿವೃದ್ಧಿ ನಿಧಿ”ಯಿಂದ ಶಾಸಕ ಶ್ರೀ ಕೆ ರಘುಪತಿ ಭಟ್ ಅವರ ಶಿಫಾರಸಿನ ಮೇರೆಗೆ ಮಂಜೂರಾದ ತ್ರಿಚಕ್ರ ವಾಹನಗಳನ್ನು ಇಂದು ದಿನಾಂಕ 21-05-2022 ರಂದು ಶಾಸಕರಾದ ಕೆ. ರಘುಪತಿ ಭಟ್ ರವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಕುದ್ರು ನಿವಾಸಿ ಚಂದ್ರಕಾಂತ್ ಹಾಗೂ ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರೂರು ಗ್ರಾಮದ ನಿವಾಸಿ ಹರೀಶ್ ಪೂಜಾರಿ ಸೇರಿದಂತೆ ಒಟ್ಟು ಎರಡು ಫಲಾನುಭವಿಗಳಿಗೆ ಶಾಸಕ ರಘುಪತಿ ಭಟ್ ಶಿಫಾರಸ್ಸಿನ ಮೇರೆಗೆ ತ್ರಿಚಕ್ರ ವಾಹನ ಮಂಜೂರಾಗಿರುತ್ತದೆ.

ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಉಪಾಧ್ಯಕ್ಷರಾದ ಉದಯ್ ಪೂಜಾರಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೀರಾ ಸದಾನಂದ ಪೂಜಾರಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ಪೂಜಾರಿ, ಚಾಂತಾರು ಗ್ರಾಮ ಪಂಚಾಯತ್ ಸದಸ್ಯರಾದ ಹೇಮಾ ಅಶೋಕ್, ಕಲ್ಯಾಣಪುರ ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ನಾಯ್ಕ್, ವಿಶು ಕಲ್ಯಾಣಪುರ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply