ತಾಯಿ ಮಗಳ ಕೊಲೆ ಪ್ರಕರಣ~ ಪ್ರಿಯತಮ ಅಂದರ್

ಹಿರಿಯಡ್ಕ ಪೊಲೀಸ್ ಠಾಣಾ ಸರಹದ್ದಿನ ಅತ್ರಾಡಿ ಗ್ರಾಮದ ಮದಗ ಮುಳ್ಳಗುಜ್ಜೆ ಎಂಬಲ್ಲಿ ವಾಸವಾಗಿರುವ ಚೆಲುವಿ (28) ಮತ್ತು 10 ವರ್ಷ ಪ್ರಾಯದ ಮಗಳನ್ನು ದಿನಾಂಕ 08/05/2022 ರಂದು ರಾತ್ರಿ ಯಾರೋ ಅಪರಿಚಿತರು ಕುತ್ತಿಗೆಯನ್ನು ಹಿಸುಕಿ ಕೊಲೆ ಮಾಡಿರುವ ಬಗ್ಗೆ ಮೃತಳ ತಂಗಿ ದೇವಿ ಇವರು ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿರುತ್ತದೆ. 

ಪ್ರಕರಣದ ತನಿಖಾಧಿಕಾರಿಯವರಾದ ಬ್ರಹ್ಮಾವರ ವೃತ್ತ ನಿರೀಕ್ಷಕರಾದ ಶ್ರೀ ಅನಂತ ಪದ್ಮನಾಭ ರವರ ನೇತೃತ್ವದಲ್ಲಿ ಪಿ.ಎಸ್.ಐ ರವರಾದ ಶ್ರೀ ಅನಿಲ್ ಬಿ ಮಾದರ, ಶ್ರೀ ಮಧು ಬಿ.ಇ, ಪ್ರೊಬೆಷನರಿ ಪಿ.ಎಸ್.ಐ ರವರಾದ ಶ್ರೀ ಮಂಜುನಾಥ ಮರಬದ & ಶ್ರೀ, ರವಿ ಬಿ ಕಾರಗಿ ಸಿಬ್ಬಂದಿಯವರಾದ ರಾಘವೇಂದ್ರ ಮತ್ತು ನಿತಿನ್‌ ರವರ ವಿಶೇಷ ತಂಡವು ಪ್ರಕರಣ ದಾಖಲಾಗಿ 48 ಗಂಟೆಯೊಳಗಾಗಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಆರೋಪಿ ಹರೀಶ. ಆರ್‌ ಯಾನೆ ಗಣೇಶ ಪ್ರಾಯ: 29 ವರ್ಷ ಎಂಬಾತನನ್ನು ದಿನಾಂಕ 11/05/2022 ರಂದು ಬಂಧಿಸಲಾಗಿದೆ. 

ಈ ಪ್ರಕರಣದ ಆರೋಪಿಯು ಹರೀಶ ಮೃತೆ ಚೆಲುವಿಯ ದೂರದ ಸಂಬಂಧಿಯಾಗಿದ್ದು, ಈತನಿಗೆ ಮದುವೆಯಾಗಿ ಇಬ್ಬರು ಮಕ್ಕಳಿರುತ್ತಾರೆ. ಗಂಡನಿಂದ ದೂರವಾಗಿರುವ ಅವಕಾಶವನ್ನು ಉಪಯೋಗಿಸಿಕೊಂಡು ಆಕೆಯ ಮನೆಗೆ ಆಗಾಗ್ಗೆ ಬಂದು ಹೋಗುತ್ತಿದ್ದು ಚೆಲುವಿಯನ್ನು ಮದುವೆ ಆಗಬೇಕೆಂದು ಒತ್ತಾಯಿಸುತ್ತಿದ್ದನು. ಚೆಲುವಿಯು ಬೇರೆ ಗಂಡಸರೊಂದಿಗೆ ಪೋನ್‌‌ನಲ್ಲಿ ಮಾತನಾಡುತ್ತಿದ್ದಾಳೆ ಎಂಬುದಾಗಿ ಸಂಶಯದಿಂದ ದ್ವೇಷಗೊಂಡು ದಿನಾಂಕ 08/05/2022 ರಂದು ರಾತ್ರಿ ಅವಳ ಮನೆಗೆ ತೆರಳಿ ಊಟ ಮಾಡಿ ಮಗಳು ಮಲಗಿದ ಬಳಿಕ ಚೆಲುವಿ ಬೇರೆಯವರೊಂದಿಗೆ ಪೋನಿನಲ್ಲಿ ಸಂಪರ್ಕದಲ್ಲಿರುವ ವಿಚಾರದಲ್ಲಿ ತಗಾದೆ ತೆಗೆದು ಗಲಾಟೆ ಮಾಡಿದ್ದು ಚೆಲುವಿ ಮಲಗಿದ್ದ ಸಮಯ ಚೆಲುವಿಯನ್ನು ಶಾಲಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದು ನಂತರ ನಿದ್ರೆಯಲ್ಲಿದ್ದ ಮಗಳು ತನ್ನ ವಿರುದ್ಧ ಸಾಕ್ಷಿ ಹೇಳಬಹುದೆಂದು ಅವಳನ್ನು ಕೂಡಾ ಶಾಲಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿರುತ್ತಾರೆ. ಕೊಲೆ ಮಾಡಿದ ನಂತರ ಚೆಲುವಿಯ ಕುತ್ತಿಗೆಯಲ್ಲಿದ್ದ ಸುಮಾರು 50,000/- ಮೌಲ್ಯದ ಚಿನ್ನದ ಸರ ಹಾಗೂ ಮೃತಳು ಉಪಯೋಗಿಸುತ್ತಿದ್ದ OPPO ಮೊಬೈಲ್ ಪೋನ್‌‌ನ್ನು ಸುಲಿಗೆ ಮಾಡಿಕೊಂಡು ಹೋಗಿರುತ್ತಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ವಿಷ್ಣುವರ್ಧನ ಎನ್‌, ಐ.ಪಿ.ಎಸ್‌‌, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಎಸ್‌ .ಟಿ ಸಿದ್ದಲಿಂಗಪ್ಪ ರವರ ಮಾರ್ಗದರ್ಶನದಂತೆ, ಶ್ರೀ ಸುಧಾಕರ ಎಸ್‌ ನಾಯ್ಕ, ಪೊಲೀಸ್ ಉಪಾಧೀಕ್ಷಕರು, ಉಡುಪಿ ಉಪ ವಿಭಾಗ, ಉಡುಪಿ ರವರ ನಿರ್ದೇಶನದಂತೆ ಈ ಕಾರ್ಯಾಚರಣೆಯಲ್ಲಿ ಶ್ರೀ ಅನಂತ ಪದ್ಮನಾಭ, ಸಿ.ಪಿ.ಐ ಬ್ರಹ್ಮಾವರ, ಹಿರಿಯಡ್ಕ ಠಾಣಾ ಪಿ.ಎಸ್.ಐ ಶ್ರೀ ಅನಿಲ್‌ ಬಿ ಮಾದರ, ಕೋಟ ಠಾಣೆಯ ಪಿ.ಎಸ್‌‌.ಐ ಶ್ರೀ ಮಧು ಬಿ.ಇ, ಹಿರಿಯಡ್ಕ ಠಾಣೆಯ ಪ್ರೊಬೆಷನರಿ ಪಿ.ಎಸ್.ಐ ಶ್ರೀ ಮಂಜುನಾಥ ಮರಬದ ಮತ್ತು ಶ್ರೀ, ರವಿ ಬಿ.ಕಾರಗಿ ಬ್ರಹ್ಮಾವರ ವೃತ್ತ ಕಛೇರಿಯ ಎ.ಎಸ್.ಐ ಕೃಷ್ಣಪ್ಪ, ಪ್ರದೀಪ್‌ ನಾಯಕ, ವಾಸುದೇವ ಪಿ, ರವೀಂದ್ರ ಹೆಚ್‌. ಶೇಖರ ಸೇರಿಗಾರ ಹಿರಿಯಡ್ಕ ಠಾಣೆಯ ಎ.ಎಸ್.ಐ ಗಂಗಪ್ಪ & ಜಯಂತ, ಸಿಬ್ಬಂದಿಯವರಾದ ರಘ, ಸದಾಶಿವ, ರಾಘವೇಂದ್ರ ಕೆ, ದಯಾನಂದ ಪ್ರಭು, ಉದಯ ಕಾಮತ್‌‌, ರಾಜೇಶ ಡಿ ಗಾರ್‌, ಸುರೇಖಾ, ರಾಕೇಶ ಶೆಟ್ಟಿ, ನಿತಿನ್‌, ಭೀಮಪ್ಪ, ಅಶೋಕ, ಸಂತೋಷ, ಕಾರ್ತಿಕ, ಆನಂದ ಕೋಟ ಠಾಣೆಯ ಗಣೇಶ, ರಾಘವೇಂದ್ರ ಬ್ರಹ್ಮಾವರ ಠಾಣೆಯ ಪ್ರವೀಣ ಶೆಟ್ಟಿಗಾರ್‌ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ತಾಂತ್ರಿಕ ತಂಡದ ಸಿಬ್ಬಂದಿಯವರಾದ ಶಿವಾನಂದ, ದಿನೇಶ ರವರಗಳು ಕೊಲೆ ಪ್ರಕರಣವನ್ನು ಭೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ.ಪ್ರಕರಣವನ್ನು ಅತೀ ಶೀಘ್ರವಾಗಿ ಭೇದಿಸಿರುವುದಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ವಿಷ್ಣುವರ್ಧನ.ಎನ್‌, ಐ.ಪಿ.ಎಸ್ ರವರು ತಂಡವನ್ನು ಅಭಿನಂದಿಸಿರುತ್ತಾರೆ.

 
 
 
 
 
 
 
 
 
 
 

Leave a Reply