ಜಿಲ್ಲಾಧಿಕಾರಿಗೆ ಕರೆ ಮಾಡಿ ಸೂಕ್ತ ಕ್ರಮವಹಿಸುವಂತೆ ತಿಳಿಸಿದ್ದೇನೆ. ಮತ್ತು ಈ ವಿಚಾರವನ್ನು ಐಎಎಸ್ ಅಧಿಕಾರಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಮೇಜರ್ ಮಣಿವಣ್ಣನ್ ರವರ ಗಮನಕ್ಕೂ ತರಲಾಗಿದೆ.
ಈ ಬಗ್ಗೆ ಮೇಜರ್ ಮಣಿವಣ್ಣನ್ ರವರು ತಕ್ಷಣ ಪ್ರತಿಕ್ರಿಯಿಸಿ ಉಡುಪಿ ಜಿಲ್ಲಾಧಿಕಾರಿಯವರ ಜೊತೆಗೆ ಚರ್ಚಿಸಿ ಶೀಘ್ರದಲ್ಲಿ ವೇತನ ಪಾವತಿಗೆ ಕ್ರಮವಹಿಸುವುದಾಗಿ ತಿಳಿಸಿದ್ದಾರೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.