ಇಂದ್ರಾಳಿ ಪ್ರೌಢಶಾಲೆ : ಮಕ್ಕಳ ದಿನದ ಹಬ್ಬ

ಉಡುಪಿ : ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಜವಹಾರಲಾಲ್ ನೆಹರುರವರ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಚಾಲಕ ಕೆ.ಅಣ್ಣಪ್ಪ ಶೆಣೈಯವರು ನೆಹರು ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಕ್ಕಳ ದಿನಾಚರಣೆಯ ಶುಭಾಶಯವನ್ನು ತಿಳಿಸಿದರು.
ಶಾಲೆಯ ಎಲ್ಲಾ ಮಕ್ಕಳ ಹುಟ್ಟು ಹಬ್ಬವನ್ನು ಕಿರಿಯ ವಿದ್ಯಾರ್ಥಿ ನಂದನ್‌ಹಾಗೂ ನಿಕಿತರಿಂದ ದೀಪ ಬೆಳಗಿಸಿ ಕೇಕ್ ಕತ್ತರಿಸಿ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.

ಸಂಸ್ಥೆಯ ಮುಖ್ಯೋಪಾಧ್ಯಾಯ ಕೆ ವಿನಾಯಕ ಕಿಣಿ ಪ್ರಾಸ್ತಾವಿಕವಾಗಿ ಮತನಾಡಿ ಸಮಾರಂಭದ ಮಹತ್ವವನ್ನು ತಿಳಿಸಿದರು.

 ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಕೆ ರತ್ನಾಕರ ಶೆಣೈ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ ದಿನೇಶ್ ಹೆಗ್ಡೆ ಆತ್ರಾಡಿ, ಕೋಶಾಧಿಕಾರಿ ಅಕ್ಷತಾ ಭಟ್, ಹಾಗೂ ಪ್ರಾರ್ಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮ ಉಪಸ್ಥಿತರಿದ್ದರು.

ವಿದ್ಯಾರ್ಥಿ ಜೋಯ ಮಕ್ಕಳ ಹಬ್ಬದ ಪ್ರಾಮುಖ್ಯತೆಯನ್ನು ವಿವರಿಸಿ ಸಾಧನ್ ನಿರೂಪಿಸಿ ಉಜ್ವಲ್ ಸ್ವಾಗತಿಸಿ ವೃದ್ಧಿ ಭಟ್ ವಂದಿಸಿದರು.

 
 
 
 
 
 
 
 
 
 
 

Leave a Reply