ಜಲಜೀವನ್ ಮಿಷನ್ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಮೊದಲ ಆದ್ಯತೆ – ಜಿ.ಪಂ. ಸಿಇಓ ನವೀನ್ ಭಟ್

ಉಡುಪಿ : ಜನಪ್ರತಿನಿಧಿಗಳು ಹೆಚ್ಚಿನ ಕಾಳಜಿವಹಿಸಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಹಕಾರ ನೀಡಿದಲ್ಲಿ ಜಲಜೀವನ್ ಮಿಷನ್ ಯೋಜನೆಯ ಯಶಸ್ವಿ ಅನುಷ್ಠಾನ ಸಾಧ್ಯ ಎಂದು ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ಹೇಳಿದರು.

ಬ್ರಹ್ಮಾವರ ತಾಲೂಕು ಕಾಡೂರು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಮಾತನಾಡಿದರು. ಜಲಜೀವನ್ ಮಿಷನ್ ನಡಿ 15ನೇ ಹಣಕಾಸು ಅನುದಾನದ ಪಾಲನ್ನು ಮೀಸಲಿರಿಸುವುದರ ಜೊತೆಗೆ ನಾಗರಿಕರು ತಮ್ಮ ಪಾಲಿನ ವಂತಿಗೆ ಯನ್ನು ನೀಡುವುದು ಅತ್ಯಗತ್ಯವಾಗಿದೆ ಹಾಗೂ ನಾಗರಿಕರಿಗೆ ಈ ಕುರಿತು ಮನವರಿಕೆ ಮಾಡುವುದು ಮಹತ್ವದ್ದಾಗಿದೆ ಎಂದು ತಿಳಿಸಿದರು.ಜಲಜೀವನ್ ಮಿಷನ್ ಅತ್ಯುತ್ತಮ ಯೋಜನೆಯಾಗಿದ್ದು ಪ್ರತಿಯೊಬ್ಬ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶವನ್ನು ಹೊಂದಿದ್ದು ಈ ಸದಾವಕಾಶವು ಎಲ್ಲಾ ನಾಗರಿಕರಿಗೆ ತಲುಪುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಬದ್ಧತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಕಾಡೂರು ಪಂಚಾಯತ್ ಅಧ್ಯಕ್ಷ ಪಾಂಡುರಂಗ ಶೆಟ್ಟಿ ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ಮನೆಗಳಿಗೂ ಜನಪ್ರತಿನಿಧಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಮೂಲಕ ಯೋಜನೆಯ ಯಶಸ್ಸಿಗೆ ಸಹಕಾರ ನೀಡುವುದಾಗಿ ತಿಳಿಸಿದರು.

ಕಾಡೂರು ಪಂಚಾಯತ್ ಉಪಾಧ್ಯಕ್ಷೆ ಅಮಿತಾ,ಸದಸ್ಯರಾದ ಗಿರೀಶ್ ರಾವ್,ರಘುರಾಮ ಶೆಟ್ಟಿ, ಜಲಂಧರ್ ,ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಇಬ್ರಾಹಿಂಪುರ ,ಕಾಡೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ. ಹಾಗೂ ಪಂಚಾಯತ್ ಸಿಬ್ಬಂದಿ, ಎಸ್ ಎಲ್ ಆರ್ ಎಮ್ ಕಾರ್ಯಕರ್ತರು ಉಪಸ್ಥಿತರಿದ್ದರು.‌ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಕಾರ್ಯಕ್ರಮ ನಿರ್ವಹಿಸಿದರು.

 
 
 
 
 
 
 
 
 
 
 

Leave a Reply