ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮವು

ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಉಡುಪಿ ಜಿಲ್ಲೆ, ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮವು ದಿನಾಂಕ: 8/11/2021 ರಂದು ಬಾಲಕಿಯರ ಪದವಿ ಪೂರ್ವ ಕಾಲೇಜು ಸಭಾ ಭವನದಲ್ಲಿ  ನಡೆಯಲಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ.ಎಸ್ ಬಾಲಾಜಿ ಯವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರುದ್ರೇಗೌಡ ವಹಿಸಲಿದ್ದಾರೆ. ಕನ್ನಡ ಜಾನಪದ ಪರಿಷತ್ತಿನ ಕರಾವಳಿ ಜಿಲ್ಲೆಗಳ ವಿಭಾಗೀಯ ಸಂಚಾಲಕರಾದ ಡಾ.ಭಾರತಿ ಮರವಂತೆ ಅವರು ಶುಶುಭಾಶಂಸನೆ ಮಾಡಲಿದ್ದಾರೆ.
 ಡಾ. ಕನರಾಡಿ ವಾದಿರಾಜ ಭಟ್ಟ ನಿವೃತ್ತ ಪ್ರಾಂಶುಪಾಲರು, ಕನ್ನಡ ಜಾನಪದ ಪರಿಷತ್ ರಾಮನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕೆ.ಸಿ ಕಾಂತಪ್ಪ, ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ  ಹಿರಿಯ ಉಪನ್ಯಾಸಕರಾದ ಡಾ.ಯಾದವ ಕರ್ಕೇರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸ ಲಿದ್ದಾರೆ ಎಂದು ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ.ಗಣೇಶ್ ಗಂಗೊಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
 
 
 
 
 
 
 
 
 
 
 

Leave a Reply