ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಪ್ರಥಮ ಸಮಾಲೋಚನಾ ಸಭೆ

ಜಗದಾದ್ಯಂತ ಜನಪ್ರಿಯವಾದ ಶ್ರೀಕೃಷ್ಣ ಜನ್ಮಾಷ್ಠಮಿ ಮಹೋತ್ಸವವನ್ನು ಉಡುಪಿಯ ಶ್ರೀಕೃಷ್ಣನ ಸನ್ನಿಧಾನದಲ್ಲಿ ಅತ್ಯಂತ ವೈಭವ ಮತ್ತು ವೈಶಿಷ್ಟ್ಯ ಪೂರ್ಣವಾಗಿ ಆಚರಿಸಲು ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠ ಸಂಕಲ್ಪಿಸಿದ್ದು ತದಂಗವಾಗಿ ಪೂರ್ವಭಾವಿ ಸಮಾಲೋಚನಾ ಪ್ರಥಮ ಸಭೆಯು ಪೂಜ್ಯ ಪರ್ಯಾಯ ಶ್ರೀಪಾದರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ , ಪರ್ಯಾಯ ಸ್ವಾಗತ ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಶ್ರೇಕೃಷ್ಣ ಮಠದ ಕನಕಮಂಟಪ ದಲ್ಲಿ ಇಂದು ನಡೆಯಿತು.

ಈ ಬಾರಿ ಶ್ರೀ ಕೃಷ್ಣಜನ್ಮಾಷ್ಟಮಿ ಆಗಸ್ಟ್ 26 , ಮತ್ತು ಶ್ರೀಕೃಷ್ಣ ಲೀಲೋತ್ಸವ ಆಗಸ್ಟ್ 27 ರಂದು ನಡೆಯಲಿದೆ.

 
 
 
 
 
 
 
 
 
 
 

Leave a Reply