ಮಲ್ಪೆ ಮೀನುಗಾರಿಕಾ ಜಟ್ಟಿ ನಿರ್ಮಾಣ ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ಸ್ಥಳ ಪರಿಶೀಲನೆ

ಮಲ್ಪೆ ಮೀನುಗಾರಿಕಾ ಜಟ್ಟಿ ನಿರ್ಮಾಣಕ್ಕೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರ ಶಿಫಾರಸ್ಸಿನ ಮೇರೆಗೆ ರೂ. 9.6 ಕೋಟಿ ಮಂಜೂರಾಗಿದ್ದು, ತ್ವರಿತವಾಗಿ ಕಾಮಗಾರಿ ಯನ್ನು ಆರಂಭಿಸುವ ಸಲುವಾಗಿ ​ಭಾನುವಾರದಂದು ಶಾಸಕ​​ ಶ್ರೀ ಕೆ. ರಘುಪತಿ ಭಟ್ ರವರು ಅಧಿಕಾರಿ ಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ಎಡ್ಲಿನ್ ಕರ್ಕಡ, ನಗರ ಸಭೆಯ ನಾಮ ನಿರ್ದೇಶಿತ ಸದಸ್ಯರಾದ ವಿಜಯ್ ಕುಂದರ್, ಮಲ್ಪೆ ಮೀನುಗಾರರ ಸಂಘ ಅಧ್ಯಕ್ಷಕೃಷ್ಣ ಸುವರ್ಣ, ಉಪಾಧ್ಯಕ್ಷ​ ​ರಮೇಶ್ ಕೋಟ್ಯಾನ್, ನಾಗರಾಜ್ ಕುಂದರ್, ವಿಠ್ಠಲ್ ಕರ್ಕೇರ, ಪ್ರಧಾನ ಕಾರ್ಯ ದರ್ಶಿ ಸುಭಾಷ್ ಮೆಂಡನ್, ಕೋಶಾಧಿಕಾರಿ ಶಿವಾನಂದ​, ಹರೀಶ್ ಕೋಟ್ಯಾನ್ ​ ಹಾಗೂ ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು. ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಉದಯ್ ಕುಮಾರ್, ಸಹಾಯಕ ಅಭಿಯಂತರರಾದ ಜಯರಾಜ್, ಮೀನುಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಶಿವಕುಮಾರ್, ಮೀನುಗಾರಿಕಾ ಬಂದರು ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಸುಷ್ಮಾ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply