ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ನದಿಯಲ್ಲಿ ಮುಳುಗಿ ನಾಲ್ವರು ಮೃತಪಟ್ಟಿದ್ದಾರೆ. ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ಮದುವೆ ಸಮಾರಂಭಕ್ಕೆ ಬಂದಿದ್ದ ಮೂವರು ಯುವಕರು ಹಾಗೂ ಓರ್ವ ಯುವತಿ ಮೃತಪಟ್ಟವರು.
ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋದಾಗ ಘಟನೆ ನಡೆದಿದೆ. ವಾಮಂಜೂರು ಮುಡುಶೆಡ್ಡೆ ನಿಖಿಲ್ (18), ಹಾಗೂ ಅರ್ಶಿತಾ (20), ವೇಣೂರು ಸುಬಾಸ್(19), ಬಜ್ಪೆ ಪೆರಾರ ರವಿ 30)ಮೃತಪಟ್ಟವರು.