ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಳದಲ್ಲಿ ಮರದ ಕೆತ್ತನೆ ಕೆಲಸಕ್ಕೆ ಚಾಲನೆ

ಉಡುಪಿ: ಜೀರ್ಣೋದ್ಧಾರಗೊಳ್ಳುತ್ತಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅನಂತನ ಚತುರ್ದಶಿಯಂದು ಭಾನುವಾರ ಮರದ ಕೆತ್ತನೆ ಕೆಲಸಕ್ಕೆ ಚಾಲನೆ ನೀಡಲಾಯಿತು. ಸಂಜೆ ಶ್ರೀದೇವಳದಲ್ಲಿ ಸಾಮೂಹಿಕ ಪ್ರಾರ್ಥನೆ ಬಳಿಕ ಮರದ ಕೆತ್ತನೆ ಕೆಲಸಕ್ಕೆ ಮುಹೂರ್ತ ನೆರವೇರಿಸಲಾಯಿತು.

ಜಿಲ್ಲಾ ಬಿಲ್ಡರ್ಸ್ ಅಸೋಸಿಯೇಶನ್ ಅಧ್ಯಕ್ಷ ಜೆರ್ರಿ ವಿನ್ಸೆಂಟ್ ಡಯಾಸ್, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ, ಶಾಸಕ ಕೆ. ರಘುಪತಿ ಭಟ್, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ರವಿರಾಜ್ ಆಚಾರ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾಗೇಶ್ ಹೆಗ್ಡೆ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ಉದ್ಯಮಿ ಸುಭಾಷ್ ಹೆಗ್ಡೆ, ದೇವಳದ ಕಾರ್ಯನಿರ್ವಹಣಾಧಿಕಾರಿ ಗಣೇಶ್ ರಾವ್ ಮೊದಲಾದವರಿದ್ದರು.

 
 
 
 
 
 
 
 
 
 
 

Leave a Reply