ಜಲಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ – ನವೀನ್ ಭಟ್

ಕಾಡೂರು – ನೀರಿನ ಸಂರಕ್ಷಣೆ ಮಹತ್ವದ ಕಾರ್ಯವಾಗಿದ್ದು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸ್ಥಳೀಯ ಆಡಳಿತಗಳು ಕ್ರಿಯಾಶೀಲತೆಯಿಂದ ಕರ‍್ಯನಿರ್ವಹಿಸಿದರೆ ಇನ್ನಷ್ಟು ಪ್ರಗತಿ ಸಾಧ್ಯವಿದೆ ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕರ‍್ಯನಿರ್ವಹಣಾಧಿಕಾರಿ ವೈ ನವೀನ್ ಭಟ್ ತಿಳಿಸಿದ್ದಾರೆ. ಕಾಡೂರು ಗ್ರಾಮಪಂಚಾಯತ್‌ನ ನಡೂರಿನಲ್ಲಿ ಜರುಗಿದ ಜಲಸಂರಕ್ಷಣೆ ಕುರಿತಾದ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗ್ರಾಮ ಪಂಚಾಯತ್‌ಗಳ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಮನ್ವಯದಿಂದ ಕರ‍್ಯನಿರ್ವಹಿಸಿ ತಮ್ಮ ವ್ಯಾಪ್ತಿಯ ಕೆರೆ ಮತ್ತು ಮದಗಗಳ ಸಮೀಕ್ಷೆ ಕಾರ್ಯ ಕೈಗೊಂಡು ನರೇಗಾ ಯೋಜನೆಯಡಿ ಕಾಮಗಾರಿಗಳ ಅನುಷ್ಠಾನ ಮಾಡುವುದು ಅತ್ಯಗತ್ಯ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಜಲಸಾಧಕ ಶಂಭುಶoಕರ ರಾವ್ ಹೆಗ್ಗುಂಜೆ ಅವರು ಮಾತನಾಡಿ ಹನಿ ನೀರಿನ ಕುರಿತಾಗಿ ವೈಯಕ್ತಿಕ ಜಾಗೃತಿ ಮಾಡಬೇಕಾಗಿದ್ದು ವ್ಯರ್ಥವಾಗಿ ಪೋಲಾಗುವ ನೀರನ್ನು ಇಂಗಿಸುವ ಬಗ್ಗೆ ಯೋಜನೆಗಳ ಮೂಲಕ ಸಂಘಟಿತರಾಗಿ ಪ್ರಯತ್ನ ಮಾಡಬೇಕಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕ ಬಾಬು ಅವರು ಮಾತನಾಡಿ, ಉಡುಪಿ ಜಿಲ್ಲೆ ನರೇಗಾ ಯೋಜನೆಯಲ್ಲಿ ಉತ್ತಮ ಸಾಧನೆ ಮಾಡಿದ್ದು ರಾಜ್ಯ ಮಟ್ಟದಲ್ಲಿ ಗುರುತಿಸುವಂತಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಹೆಚ್ಚಿನ ಆಸ್ತಿಗಳನ್ನು ಸೃಜನೆ ಮಾಡಲು ಗ್ರಾಮ ಪಂಚಾಯತ್‌ಗಳು ಈಗಿನಿಂದಲೇ ಕಾರ್ಯ ಪ್ರವೃತ್ತರಾಗಬೇಕು ಎಂದು ತಿಳಿಸಿದರು.
ಕಾಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾಂಡುರAಗ ಶೆಟ್ಟಿ ನಡೂರು ಮಾತನಾಡಿ, ನೀರಿನ ಸಂರಕ್ಷಣೆಯ ನಿಟ್ಟಿನಲ್ಲಿ ಪಂಚಾಯತ್‌ಗಳಿಗೆ ನರೇಗಾ ಯೋಜನೆ ವರದಾನವಾಗಿದ್ದು ಕೆರೆ ಮತ್ತು ಮದಗಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕಾಗಿದೆ ಎಂದು ತಿಳಿಸಿದರು. ಕಾಡೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಅಮಿತಾ, ಬ್ರಹ್ಮಾವರ ತಾಲೂಕು ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಗಳು, ತಾಂತ್ರಿಕ ಸಿಬ್ಬಂದಿ ಹಾಗೂ ಪಂಚಾಯತ್ ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ರಾಜ್ಯ ಮಟ್ಟದಲ್ಲಿ ಪುರಸ್ಕಾರ ಪಡೆದ ನರೇಗಾ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಹಾಗೂ ನರೇಗಾ ಯೋಜನೆಯಡಿ ಉತ್ತಮ ಸಾಧನೆ ಮಾಡಿದ ನಾಲ್ಕೂರು, ಬಿಲ್ಲಾಡಿ ಹಾಡೂ ಕಾಡೂರು ಗ್ರಾಮಪಂಚಾಯತ್‌ಗಳ ಅಧ್ಯಕ್ಷರು,ಅಧಿಕಾರಿಗಳು ಹಾಗೂ ಸಿಬ್ಬಂದಿಯವರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಕಾಡೂರು ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ .ಕೆ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply