ಉಡುಪಿ : ವೆಸ್ಟ್ ಇಂಡೀಸ್ನ ಸೈಂಟ್ ಜಾರ್ಜ್ ವಿಶ್ವವಿದ್ಯಾನಿಲಯದ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಸುಬ್ರಹ್ಮಣ್ಯ ಉಪಾಧ್ಯ ಮತ್ತು ಡಾ. ಶರ್ಮಿಳಾ ಉಪಾಧ್ಯ ದಂಪತಿಗಳು ಇಂದು (23-06-2022) ಯಕ್ಷಗಾನ ಕಲಾರಂಗದ ಕಚೇರಿಗೆ ಭೇಟಿ ನೀಡಿ ಸಂಸ್ಥೆಯ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಮೆಚ್ಚಿಕೊಂಡು ರೂ. ಎರಡು ಲಕ್ಷ ದೇಣಿಗೆ ನೀಡಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಶಾಲು ಸ್ಮರಣಿಕೆ ನೀಡಿ ದಂಪತಿಗಳನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಜತೆಕಾರ್ಯದರ್ಶಿಗಳಾದ ಪ್ರೊ. ನಾರಾಯಣ ಎಂ. ಹೆಗಡೆ, ಹೆಚ್.ಎನ್. ಶೃಂಗೇಶ್ವರ ಮತ್ತು ಕೆ. ಅಜಿತ್ ಕುಮಾರ್ ಉಪಸ್ಥಿತರಿದ್ದರು.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.