ಲಕ್ನೋ: ಬಿಜೆಪಿ ಹಿರಿಯ ನಾಯಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರು (89) ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಲ್ಯಾಣ್ ಸಿಂಗ್ ಅವರನ್ನ ಲಕ್ನೋದ ಸಂಜಯ್ ಗಾಂಧಿ ಪೋಸ್ಟ್ ಗ್ರ್ಯಾಜುವೇಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್( ಎಸ್ಜಿಪಿಜಿಐ) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಆ.21) ಕೊನೆಯುಸಿರು ಎಳೆದರು.
ಎಸ್ಜಿಪಿಜಿಐ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಅವರ ಆರೋಗ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿರಲಿಲ್ಲ. ಸಾಕಷ್ಟು ಚಿಕಿತ್ಸೆ ನೀಡಿ ಗುಣಪಡಿಸಲು ಯತ್ನಿಸಿದ್ದರೂ ಸಫಲವಾಗಲಿಲ್ಲ. ಕಲ್ಯಾಣ್ ಸಿಂಗ್ ನಿಧನಕ್ಕೆ ಪಿಎಂ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸೇರಿದಂತೆ ಹಲವು ನಾಯಕರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.