ಉಡುಪಿ : ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದಿನಾಂಕ 11-01-2021 ರಿಂದ ದಿನಾಂಕ 19-01-2021 ರ ವರೆಗೆ ಶ್ರೀ ವೆಂಕಟರಮಣ ದೇವರಿಗೆ, ಶ್ರೀ ಈಶ್ವರ, ಶ್ರೀ ಗಣಪತಿ ಮತ್ತು ಮುಖ್ಯಪ್ರಾಣ ದೇವರಿಗೆ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ, ಮಹಾ ಅನ್ನಸಂತರ್ಪಣೆ ನಡೆಯಲಿದೆ. ಈ ಹಿನ್ನೆಲೆ ಇಂದು ದಿನಾಂಕ 14-01-2021 ರಂದು ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಹೊರೆಕಾಣಿಕೆ ಮೆರವಣಿಗೆಗೆ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಸಾಧು ಸಾಲ್ಯಾನ್ ಭಗವದ್ವಜ ತೋರಿಸುವ ಮೂಲಕ ಚಾಲನೆ ನೀಡಿದರು. ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರು, ಶಾಸಕ ಕೆ. ರಘುಪತಿ ಭಟ್ ಉಪಸ್ಥಿತರಿದ್ದರು.
ಇಂದಿನ ಹೊರೆಕಾಣಿಕೆ ಮೆರವಣಿಗೆಯು ಅಂಬಾಗಿಲು ಜನತಾ ವ್ಯಾಯಾಮ ಶಾಲೆಯಿಂದ ಪ್ರಾರಂಭಗೊಂಡು ದೊಡ್ಡಣ್ಣಗುಡ್ಡೆ ಮಾರ್ಗವಾಗಿ ಸಾಗಿ ವಾಜಪೇಯಿ ಪಾರ್ಕ್ ಬಳಿಯಿಂದ ಕರಂಬಳ್ಳಿ ದೇವಸ್ಥಾನಕ್ಕೆ ತಲುಪಿತು.
ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ಶ್ರೀ ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಯಶ್ ಪಾಲ್ ಸುವರ್ಣ,