ಕರಂಬಳ್ಳಿ ವೇಂಕಟರಮಣ ದೇವರಿಗೆ ರಜತ ದ್ವಾರ ಸಮರ್ಪಣೆ

ಉಡುಪಿ ಶಾಸಕ ಕೆ ರಘುಪತಿ ಭಟ್ಟರ ಮಾತೃಶ್ರೀ ಸರಸ್ವತಿ ಬಾರಿತ್ತಾಯರ ಸಂಕಲ್ಪದಂತೆ ಅವರ ಮನೆಮಂದಿಯ ಸೇವೆಯಾಗಿ ಕರಂಬಳ್ಳಿ ಶ್ರೀ ವೇಂಕಟರಮಣ ದೇವರಿಗೆ ರಜತದ್ವಾರ ಸಮರ್ಪಣೆಯು ಶನಿವಾರ ನೆರವೇರಿತು .

ಪಾಡಿಗಾರು ವಾಸುದೇವ ತಂತ್ರಿಗಳ ಏತೃತ್ವದಲ್ಲಿ ದೇವರಿಗೆ ನವಕ ಪ್ರಧಾನ ಹೋಮ‌ಸಹಿತ ಕಲಶಾಭಿಷೇಕ ಮಹಾಒಊಜೆ ನೆರವೇರಿಸಿ ಸುಮಾರು 6 ಕೆಜಿ ಬೆಳ್ಳಿಯಲ್ಲಿ ತಯಾರಿಸಲಾದ ದ್ವಾರ ವನ್ನು ದೇವರಿಗೆ ಅರ್ಪಿಸಿ ಜಗದೊಳಿತಿಗೆ ಪ್ರಾರ್ಥಿಸಲಾಯಿತು .ಅರ್ಚಕರಾದ ಗೋವಿಂದ ಐತಾಳ್ ದಿವಾಕರ ಐತಾಳ್ ಪ್ರಸನ್ನ ಆಚಾರ್ಯವರಮೇಶ ಐತಾಳ್ , ಶಾಸಕ ಭಟ್ ಸಹೋದರರು ದೇವಳದ ಆಡಳಿತ ಮಂಡಳಿ ಸದಸ್ಯರು ನೂರಾರು ಮಂದಿ ಭಕ್ತರು ಉಪಸ್ಥಿತರಿದ್ದರು . ಉಡುಪಿಯ ಭಾರತೀಶ ಜ್ಯುವೆಲ್ಲರ್ಸ್ ನವರು ದ್ವಾರ ನಿರ್ಮಿಸಿ ಕೊಟ್ಟಿರುತ್ತಾರೆ.

 
 
 
 
 
 
 
 
 
 
 

Leave a Reply