ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ಉಡುಪಿ ಜಿಲ್ಲೆಯ ವತಿಯಿಂದ ಆರ್ಕೆಸ್ಟ್ರಾ ಕಲಾವಿದರಿಗೆ ರಾತ್ರಿ ಕಾರ್ಯಕ್ರಮ ಮುಗಿಸಿ ಬರುವಾಗ ಆಗುತ್ತಿರುವ ತೊಂದರೆಗಳು ಹಾಗೂ ರಾತ್ರಿ ಕರ್ಫ್ಯೂನಿಂದಾಗಿ ವಹಿಸಿಕೊಂಡ ಸಂಗೀತ ಕಾರ್ಯಕ್ರಮಗಳು ರದ್ದಾಗಿ ಕುಟುಂಬ ನಿರ್ವಹಣೆ ಕಷ್ಟವಾಗಿದೆ.
ಕರೋನಾದಿಂದಾಗಿ ಅದೆಷ್ಟೋ ಪೂರ್ವ ನಿಗದಿತ ಆರ್ಡರ್ ಗಳು ಕ್ಯಾನ್ಸಲ್ ಆಗಿದ್ದು ನಾವೆಲ್ಲ ತುಂಬ ಆರ್ಥಿಕ ಸಂಕಷ್ಟದಲ್ಲಿದ್ದೇವೆ. ಕಳೆದ ವರುಷದ ಸೀಸನ್ ಸಮಯದಲ್ಲಿ ಮತ್ತು ಈ ವರುಷದಲ್ಲೂ ಇದೇ ಪರಿಸ್ಥಿತಿ ಮುಂದು ವರೆದಿದ್ದು ನಮಗೆಲ್ಲ ತುಂಬ ಆತಂಕ ಉಂಟಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಇವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಸಂಗೀತ ಕಲಾವಿದರ ಉಡುಪಿ ವಲಯಾಧ್ಯಕ್ಷೆ ಮುಕ್ತಾ ಶ್ರೀನಿವಾಸ್ ಭಟ್, ಸಂತೋಷ್ ಪಾನಾ, ಪ್ರಜ್ವಲ್ ಆಚಾರ್ಯ,ಶರತ್ ಉಚ್ಚಿಲ, ವಾಮನ ಕುಮಾರ್ ಅರುಣ್ , ರೋಹಿತ್ ಮಲ್ಪೆ ಹಾಗೂ ಅನೇಕ ಕಲಾವಿದರು ಭಾಗವಹಿಸಿದ್ದರು.