‘ಕಲಾಂ ಜೀವನ ಧರ್ಮ’ ಉಪನ್ಯಾಸ ಕಾರ್ಯಕ್ರಮ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಉಡುಪಿ ತಾಲೂಕು ಘಟಕ ಹಾಗೂ ಎಂಜಿಎಂ ಕಾಲೇಜು ಉಡುಪಿ ಸಹಕಾರದೊಂದಿಗೆ ಮೇ 8 ಸೋಮವಾರ ಮಧ್ಯಾಹ್ನ 2.00 ಗಂಟೆಯಿಂದ 3:00ವರೆಗೆ ದಿ| ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮ ಎಂಜಿಎಂ ಕಾಲೇಜಿನ ಎ. ವಿ ಹಾಲ್ ನಲ್ಲಿ ನಡೆಯಲಿದೆ.

ದಿವಂಗತ ಮಾಜಿ ರಾಷ್ಟ್ರಪತಿ ಡಾ| ಅಬ್ದುಲ್ ಕಲಾಂ ಅವರ ಶಿಷ್ಟಾಚಾರ ಹಾಗೂ ಸಮನ್ವಯ ಅಧಿಕಾರಿಯಾಗಿದ್ದ ಕೆ . ಜಯಪ್ರಕಾಶ್  ರಾವ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಕ ಸಾ ಪ ಉಡುಪಿ ತಾಲೂಕು ಘಟಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತದೆ.

 
 
 
 
 
 
 
 
 
 
 

Leave a Reply