ಜಿಲ್ಲೆಯ 5 ಹಿರಿಯ ಸಾಧಕ ಶಿಕ್ಷಕರಿಗೆ ಗೌರವ ಪುರಸ್ಕಾರ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲೆಯ 5 ಹಿರಿಯ ಸಾಧಕ ಶಿಕ್ಷಕರಿಗೆ ಗೌರವ ಪುರಸ್ಕಾರ 2022 ನೀಡಿ ಗೌರವಿಸಲಾಗುವುದು.

ಸೆಪ್ಟೆಂಬರ್ 5 ರಂದು ಸಂಜೆ 4:30ಕ್ಕೆ ಉಡುಪಿಯ ಮಲಬಾರ್ ಅಂಡ್ ಗೋಲ್ಡ್ ಡೈಮಂಡ್ಸ್ ಶಾಖೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಲಕ್ಷ್ಮೀನಾರಾಯಣ ಭಟ್ (ಶಿಕ್ಷಣ ಹಾಗೂ ರಂಗಭೂಮಿ) , ರಾಜೇಂದ್ರ ಭಟ್ ಕೆ (ಶಿಕ್ಷಣ ಹಾಗೂ ನಿರೂಪಣೆ ) , ಪ್ರೊ. ನಾರಾಯಣ ಎಂ. ಹೆಗಡೆ (ಶಿಕ್ಷಣ ಹಾಗೂ ಸಂಘಟನೆ), ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ ( ಶಿಕ್ಷಣ ಹಾಗೂ ಅರ್ಥಶಾಸ್ತ್ರ) , ಡಾ. ರೇಖಾ ವಿ. ಬನ್ನಾಡಿ (ಶಿಕ್ಷಣ ಹಾಗೂ ಸಾಹಿತ್ಯ) ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆಗಾಗಿ ಈ ಪುರಸ್ಕಾರ ನೀಡಲಾಗುತ್ತದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರವಿರಾಜ್ ಎಚ್. ಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ .

 
 
 
 
 
 
 
 
 

Leave a Reply