ಕನ್ನಡ ಭವನ ನಿರ್ಮಾಣಕ್ಕಾಗಿ ಮನವಿ ಸಲ್ಲಿಕೆ

ಕನ್ನಡ ಭವನ ನಿರ್ಮಾಣಕ್ಕಾಗಿ ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ಸಚಿವರಾದ ಸುನೀಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಮಾನ್ಯ ಮುಖ್ಯ ಮಂತ್ರಿ ಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು ಉಡುಪಿ ಜಿಲ್ಲಾ ಕಸಾಪ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಬ್ರಹ್ಮಾವರ ಕಸಾಪ ಅಧ್ಯಕ್ಷ ರಾಮಚಂದ್ರ ಐತಾಳ,ಕಾಪು ಕಸಾಪ ಅಧ್ಯಕ್ಷ ಪುಂಡಲೀಕ ಮರಾಠೆ, ಕನ್ನಡ ಭವನ ನಿರ್ಮಾಣ ಸಮಿತಿ ಅಧ್ಯಕ್ಷ ದೇವದಾಸ ಹೆಬ್ಬಾರ್, ನರಸಿಂಹ ಮೂರ್ತಿ ರಾವ್, ದಿನಕರ ಆರ್ ಶೆಟ್ಟಿ, ಮಾನ್ಯ ಸಚಿವರಾದ ಸುನಿಲ್ ಕುಮಾರ್, ಶಾಸಕರಾದ ಲಾಲಾಜಿ ಮೆಂಡನ್, ಜಿಲ್ಲಾಧಿಕಾರಿ ಕೂರ್ಮರಾವ್ಉ, ಮಟ್ಟಾರ್ ರತ್ನಾಕರ ಹೆಗ್ಡೆ ಪಸ್ಥಿತರಿದ್ದರು.

 
 
 
 
 
 
 
 
 

Leave a Reply