ಡಿಸಂಬರ್ 30 ರಂದು ಮಣಿಪಾಲದ ಶಿವಪ್ಪಾಡಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿರುವ ಉಡುಪಿ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಂತರಾಷ್ಟ್ರೀಯ ಕಲಾವಿದ, ಖ್ಯಾತ ಪರಿಸರವಾದಿ ದಿನೇಶ್ ಹೊಳ್ಳ ಅವರು ಉದ್ಘಾಟಿಸಲಿದ್ದಾರೆ ಎಂದು ಕ ಸಾ ಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.